ಕಲಬುರಗಿ | ಕಳಪೆ ಕಾಮಗಾರಿ : ಕುಕ್ಕುಂದಾ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಗ್ರಾಮ ಪಂಚಾಯತ ಸಾಮಾನ್ಯ ಸಭೆಯ ನಡವಳಿ ಧಿಕ್ಕರಿಸಿ ಗುತ್ತಿಗೆದಾರರ ಜೊತೆ ಶಾಮೀಲಾಗಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿ ಕಳಪೆಯಾಗಿ ನಿರ್ಮಿಸುತ್ತಿರುವ ಪಿಡಿಒ ಮಮತಾ ಎಸ್. ಗೋಗಿ ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಗ್ರಾ.ಪಂ ಸದಸ್ಯರು, ಮುಖಂಡರು ಸೇಡಂ ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ʼಸೇಡಂ ತಾಲೂಕಿನ ಕುಕ್ಕುಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ತೋಟ್ನಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿ ಈ ಮೊದಲು ಸರಕಾರಿ ಶಾಲೆಯ ಹತ್ತಿರ ನಿರ್ಮಿಸಲು ಗ್ರಾಮ ಪಂಚಾಯತ ಸಾಮಾನ್ಯ ಸಭೆಯಲ್ಲಿ ಎಲ್ಲ ಗ್ರಾಮ ಪಂಚಾಯತ ಸದಸ್ಯರ ಸರ್ವಾನುಮತದಿಂದ ನಿರ್ಧರಿಸಲಾಗಿತ್ತು. ಆದರೆ ಪಿಡಿಒ ಅವರು ಗ್ರಾಮ ಪಂಚಾಯತ ಸಾಮಾನ್ಯ ಸಭೆಯ ನಡವಳಿ ಗಾಳಿಗೆ ತೂರಿ ಗ್ರಾಮದ ಬೇರೆಡೆ ಘಟಕ ನಿರ್ಮಾಣಕ್ಕೆ ಮುಂದಾಗಿ ಕಳಪೆ ಕಾಮಗಾರಿ ಕೈಗೊಂಡಿದ್ದಾರೆ. ಗ್ರಾಮಸ್ಥರ ವಿರೋಧದ ನಡುವೆಯೂ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್‌ ನಡಾವಳಿಯಲ್ಲಿ ನಿರ್ಧಾರದಂತೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ಇಲ್ಲದಿದ್ದರೆ ಗ್ರಾಮಸ್ಥರು ಉಗ್ರ ಹೋರಾಟ ನಡೆಸುತ್ತೇವೆʼ ಎಂದು ಎಚ್ಚರಿಕೆ ನೀಡಿದರು.

Advertisements

ಗ್ರಾಮ ಪಂಚಾಯತ ಸದಸ್ಯೆ ಲಕ್ಷ್ಮೀಬಾಯಿ ದೊಡ್ಡಮನಿ, ಗ್ರಾಮ ಪಂಚಾಯತ ಸದಸ್ಯೆ ಮಹಾನಂದ ಪಂಚಾಕ್ಷರಿ, ಮಾಜಿ ಗ್ರಾ.ಪಂ. ಸದಸ್ಯ ವೀರಭದ್ರಪ್ಪ ಹುಣಚಳ್ಳಿ, ಮಾಜಿ ಗ್ರಾ.ಪಂ. ಸದಸ್ಯ ವೈಜುನಾಥ ಮುದ್ದಾ, ದಶರಥ ಹಲಕರ್ಟಿ, ಶಿವರಾಜ ಅಣ್ಣಪಗೋಳ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X