ಸರ್ಕಾರಿ ಅಧಿಕಾರಿಯ ಮೇಲೆ ಮೀನು ಎಸೆದ ಪ್ರಕರಣ: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಖುಲಾಸೆ

Date:

Advertisements

ಸರ್ಕಾರಿ ಅಧಿಕಾರಿಯ ಮೇಲೆ ಮೀನು ಎಸೆದ ಮತ್ತು ಅವರನ್ನು ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಿಜೆಪಿ ಸಚಿವ ನಿತೇಶ್ ರಾಣೆ ಮತ್ತು ಇತರ 30 ಜನರನ್ನು ಮಹಾರಾಷ್ಟ್ರದ ಸಿಂಧುದುರ್ಗದ ನ್ಯಾಯಾಲಯವು ಖುಲಾಸೆಗೊಳಿಸಿದೆ.

2017ರ ಜುಲೈ 6ರಂದು ರಾಣೆ ಮತ್ತು ಸುಮಾರು 100 ಇತರರು ಮೀನುಗಾರಿಕೆ ಇಲಾಖೆಯ ಸಹಾಯಕ ಆಯುಕ್ತ ಪ್ರದೀಪ್ ವಾಸ್ಟ್ ಅವರ ಮಾಲ್ವನ್ ಕಚೇರಿಗೆ ವಲಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲೆಂದು ಬಂದಿದ್ದರು. ಈ ವೇಳೆ ಅವರನ್ನು ನಿಂದಿಸಿ, ಅವರ ಮೇಲೆ ಮೀನು ಎಸೆದಿದ್ದರು. ಮೀನುಗಾರಿಕೆ ದೋಣಿಗಳನ್ನು ಸುಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ಆರೋಪಿಸಲಾಗಿದೆ. ಈ ಸಂಬಂಧ ರಾಣೆ ಮತ್ತು ಇತರೆ ಮೂವತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿದ್ದೀರಾ? ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಆಗುತ್ತದೆ: ಮಹಾರಾಷ್ಟ್ರ ಬಿಜೆಪಿ ಮಂತ್ರಿಯ ವಿವಾದಾತ್ಮಕ ಹೇಳಿಕೆ

Advertisements

ಈ ಸಂಬಂಧ ಮೇ 21ರಂದು ನೀಡಿದ ತೀರ್ಪಿನ ವಿವರವನ್ನು ಭಾನುವಾರ ನೀಡಲಾಗಿದೆ. ಅಧಿಕಾರಿ ಪ್ರದೀಪ್ ವಾಸ್ಟ್ ಅವರು ತಮ್ಮ ಮೇಲೆ ರಾಣೆ ಅವರು ಮೀನು ಎಸೆದಿದ್ದಾರೆ ಎಂದು ತಮ್ಮ ಸಾಕ್ಷ್ಯದಲ್ಲಿ ತಿಳಿಸಿಲ್ಲ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು(ಸಿಂಧುದುರ್ಗ) ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರದೀಪ್ ವಾಸ್ಟ್ ಅವರು ಒದಗಿಸಿದ ಸಾಕ್ಷ್ಯದ ಪ್ರಕಾರ ರಾಣೆ ಜೊತೆಗಿದ್ದ ವ್ಯಕ್ತಿಗಳು ಅಧಿಕಾರಿಯ ಮೇಲೆ ಮೀನು ಎಸೆದಿದ್ದಾರೆ. ಆದರೆ ಯಾರು ಎಸೆದಿರುವುದು, ಯಾರು ನೋವುಂಟುಮಾಡಿದ್ದು ಎಂಬುದು ಖಚಿತವಾಗಿಲ್ಲ. ಯಾವುದೇ ವಿಶ್ವಾಸಾರ್ಹ ಪುರಾವೆಗಳು ದಾಖಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆಪಾದಿತ ಘಟನೆಯ ವೀಡಿಯೊ ಕ್ಲಿಪ್ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ನಂತರ ರಾಣೆ ಮತ್ತು ಇತರರನ್ನು ಬಂಧಿಸಲಾಗಿದ್ದು, ಅದೇ ದಿನ ಅವರಿಗೆ ಜಾಮೀನು ಸಿಕ್ಕಿದೆ.

2014ರಿಂದ ಸಿಂಧುದುರ್ಗ ಜಿಲ್ಲೆಯ ಕಂಕವಲಿಯಲ್ಲಿ ಶಾಸಕರಾಗಿರುವ ರಾಣೆ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಸಚಿವರನ್ನಾಗಿ ದೇವೇಂದ್ರ ಫಡ್ನವೀಸ್ ಅವರ ಸಂಪುಟಕ್ಕೆ ಸೇರಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X