ಕೈ ಎತ್ತಿ ಫೋಟೊ ತೆಗೆಸಿಕೊಳ್ಳುವ ಸಭೆಯಿಂದ ಏನು ಉಪಯೋಗವಾಗುವುದಿಲ್ಲ: ಆರ್‌ ಅಶೋಕ

Date:

Advertisements

ಬೆಂಗಳೂರಿನಲ್ಲಿ ನಡೆಯತ್ತಿರುವ ಮಹಾಘಟಬಂಧನ್ ಸಭೆಯನ್ನು ಬಿಜೆಪಿ ಮಾಜಿ ಸಚಿವ ಆರ್ ಅಶೋಕ್, ಫೋಟೊ ಶೂಟ್‌ಗೆ ಹೋಲಿಕೆ ಮಾಡಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನಡೆಸುವವರು ಅಧಿಕಾರವನ್ನು ಯಾವ ರೀತಿಯಾಗಿ ದುರುಪಯೋಗ ಮಾಡುತ್ತಿದ್ದಾರೆ ಎನ್ನುವುದನ್ನು ನೋಡುತ್ತಿದ್ದೇನೆ. ದೇಶದ ವಿಪಕ್ಷಗಳ ನಾಯಕರೆಲ್ಲರೂ ಕೈ ಎತ್ತಿ ಫೋಟೊ ಶೂಟ್‌ ಮಾಡಿಕೊಂಡು ಹೋಗುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಯಾವುದೇ ಸಿದ್ದಾಂತಗಳಿಲ್ಲ ಅವರಿಗೆ, ಅವರವರ ರಾಜ್ಯಗಳಲ್ಲಿ ಒಬ್ಬರಿಗೊಬ್ಬರು ಕಚ್ಚಾಡುತ್ತಾರೆ. ತಮಿಳುನಾಡು, ಕೇರಳ, ಪಶ್ಛಿಮಬಂಗಾಳದಲ್ಲಿ ಜಗಳವನ್ನು ಮಾಡುತ್ತಾರೆ. ಇಲ್ಲಿ ಒಂದಾಗುತ್ತಾರೆ. ಅವರ ಟಾರ್ಗೆಟ್ ಮೋದಿ, ಅದೊಂದೆ ಅಜೆಂಡಾ” ಎಂದು ಲೇವಡಿ ಮಾಡಿದ್ದಾರೆ.

Advertisements

“ಫೋಟೊ ಶೋ ಅಷ್ಟೆ ಸಭೆಯಿಂದ ಏನು ಉಪಯೋಗವಾಗುವುದಿಲ್ಲ. ಮೋದಿ ವಿರುದ್ದ ನಾವಿದ್ದೇವೆ ಅನ್ನೋದು ಅಷ್ಟೇ ಅವರಿಗೆ ಗೊತ್ತಿದೆ. ಆದರೆ, ದೇಶದ ಬಡವರಿಗೆ ಮೋದಿ ಏನು ಅಂತ ಗೊತ್ತಿದೆ. ಅಲ್ಲದೆ ಮೋದಿಯವರಿಂದ ವಿಶ್ವಮಟ್ಟದಲ್ಲಿ ಭಾರತಕ್ಕೆ ಹೆಸರು ಬಂದಿದೆ. ಚಂದ್ರಯಾನ-3 ಕೂಡ ಯಶಸ್ವಿಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿರೋಧ ಪಕ್ಷಗಳ ಸಭೆ | ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯ ಇಲ್ಲ: ಕೆ ಸಿ ವೇಣುಗೋಪಾಲ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X