ವಿಜಯಪುರ | ಲೋಟಸ್ ಕಾಲೇಜಿನಿಂದ ವಿಶ್ವ ತಂಬಾಕುರಹಿತ ದಿನ; ಜನ ಜಾಗೃತಿ ಜಾಥಾ

Date:

Advertisements

ಪ್ರತಿ ವರ್ಷ ಮೇ 31ರಂದು ವಿಶ್ವದಾದ್ಯಂತ ವಿಶ್ವ ತಂಬಾಕುರಹಿತ ದಿನ(WNTD) ಆಚರಿಸಲಾಗುತ್ತದೆ. ವಾರ್ಷಿಕ ಆಚರಣೆಯು ಸಾರ್ವಜನಿಕರಿಗೆ ತಂಬಾಕು ಬಳಕೆಯ ಅಪಾಯಗಳು, ತಂಬಾಕು ಸಾಂಕ್ರಾಮಿಕ ರೋಗ ಮತ್ತು ಅದು ಉಂಟುಮಾಡುವ ತಡೆಗಟ್ಟಬಹುದಾದ ಸಾವು ಮತ್ತು ರೋಗದ ಬಗ್ಗೆ ಜಾಗತಿಕ ಗಮನ ಸೆಳೆಯಲು WHO ಸದಸ್ಯ ರಾಷ್ಟ್ರಗಳು 1987ರಲ್ಲಿ ವಿಶ್ವ ತಂಬಾಕುರಹಿತ ದಿನವನ್ನು ಸ್ಥಾಪಿಸಿದವು ಎಂದು ಡಾ. ಅಗರ್ ವಾಲ್ ತಿಳಿಸಿದರು.

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಲೋಟಸ್ ಡಿ-ಫಾರ್ಮಸಿ ನರ್ಸಿಂಗ್ ಪ್ಯಾರಾಮೆಡಿಕಲ್ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ದಿನಾಚರಣೆಯ ಜನ ಜಾಗೃತಿ ಜಾತ ಕಾರ್ಯಕ್ರಮಕ್ಕೆ ಸಮುದಾಯ ಆರೋಗ್ಯ ಕೇಂದ್ರ ತಾಳಿಕೋಟಿಯ ವೈದ್ಯಾಧಿಕಾರಿ ಡಾ. ಹುಕ್ಕೇರಿ ಚಾಲನೆ ನೀಡಿದ ಬಳಿಕ ಮಾತನಾಡಿದರು.

“ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿ೦ದ ಅಂದರೆ 30-40 ಹರೆಯದವರಿಗಿಂತ ಹೆಚ್ಚಾಗಿ ಯುವಜನರೇ ಅಧಿಕವಾಗಿ ತಂಬಾಕು ವಸ್ತುಗಳನ್ನು ಸೇವಿಸುತಿದ್ದಾರೆ. ಹಾಗಾಗಿ ಯುವಜನರಿಗೆ ಇದರಿಂದಾಗುವ ಹಾನಿ, ತೊಂದರೆಗಳನ್ನು ಅರ್ಥಮಾಡಿಸಲು ಒಂದು ಕಾರ್ಯಕ್ರಮ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು” ಎಂದರು.

Advertisements

ಜಾಗೃತಿ ಜಾತವನ್ನು ಸಮುದಾಯ ಆರೋಗ್ಯ ಕೇಂದ್ರದಿಂದ ಬಸ್ ಸ್ಟ್ಯಾಂಡ್ ಮಾರ್ಗವಾಗಿ ಬಿಜಾಪುರ್ ಸರ್ಕಲ್‌ನಿಂದ ಅಂಬೇಡ್ಕರ್ ಸರ್ಕಲ್‌ವರೆಗೆ ವಿಶ್ವ ತಂಬಾಕು ರಹಿತ ದಿನದ ಬಗ್ಗೆ ಘೋಷಣೆ ಕೂಗುತ್ತ, ವಿದ್ಯಾರ್ಥಿಗಳು ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಜಾಗೃತಿ ಜಾತವನ್ನು ಯಶಸ್ವಿಗೊಳಿಸಿದರು.

ಲೋಟಸ್ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X