ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 8,800 ಕೋಟಿ ರೂ. ಹೂಡಿಕೆ, 14,000 ಉದ್ಯೋಗ ಸೃಷ್ಟಿ

Date:

Advertisements
  • ಸಿಎಂ, ಕೈಗಾರಿಕಾ ಸಚಿವರೊಂದಿಗೆ ಫಾಕ್ಸ್ ಕಾನ್ ಕಂಪನಿ ನಿಯೋಗ ಸಭೆ
  • 8,800 ಕೋಟಿ ರೂ ಹೂಡಿಕೆ, 14 ಸಾವಿರ ಉದ್ಯೋಗ ಸೃಷ್ಟಿ ಭರವಸೆ

ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ಸೋಮವಾರ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ” ಎಂದು ವಿವರಿಸಿದರು.

ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Advertisements

ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (ಎಫ್ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟ್ರಿಯಲ್ ಟೌನ್ ಷಿಪ್ ನಲ್ಲಿ ನಿಯೋಗದ ಸದಸ್ಯರು ಇಂದೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ.

ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ್ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು ‘ಎಂಡ್ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ.

ಈ ಸುದ್ದಿ ಓದಿದ್ದೀರಾ? ದಲಿತರಿಗೆ ಭೂಮಿ ಪರಬಾರೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮಾತನಾಡಿ, “ನಮ್ಮ ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸೆಮಿ‌ ಕಂಡಕ್ಟರ್ ಸೇರಿದಂತೆ ಬೇರೆ ಯಾವುದೇ ಉದ್ದಿಮೆಯನ್ನು ಸ್ಥಾಪಿಸಲು ಬಯಸಿದರೆ ಅಗತ್ಯ ಎಲ್ಲ ನೆರವನ್ನೂ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಎಫ್ಐಐ ಪ್ರಧಾನ ವ್ಯವಸ್ಥಾಪಕರುಗಳಾದ ಮೈಕೇಲ್ ಲಿಂಗ್, ಜೇಸನ್ ಲಾವು, ಆಂಜಿ ಲಿನ್, ನಿರ್ದೇಶಕರಾದ ಸೆಂಥಿಲ್ ಕುಮಾರ, ಭರತ್ ದಂಡಿ ಮತ್ತಿತರರು ಇದ್ದರು.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X