ವಿಜಯಪುರ | ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಕಾಪಾಡಿ, ಪರಿಸರ ಸಂರಕ್ಷಿಸಿ: ಸಂಸದ ರಮೇಶ ಜಿಗಜಿಣಗಿ

Date:

Advertisements

ಜನಸಂಖ್ಯೆ ಹೆಚ್ಚಳದಿಂದಾಗಿ, ಅಭಿವೃದ್ಧಿ ಕಾರ್ಯಗಳ ನೆಪದಲ್ಲಿ ಅನೇಕ ಗಿಡ ಮರಗಳು ನಾಶವಾಗುತ್ತಿದ್ದು, ಇದನ್ನು ಸರಿದೂಗಿಸಲು ಪ್ರತಿಯೊಬ್ಬರೂ ಒಂದೊಂದು ಗಿಡಮರಗಳನ್ನು ನೆಟ್ಟು ಪಾಲನೆ, ಪೋಷಣೆ ಮಾಡಿ ಪರಿಸರ ಸಂರಕ್ಷಿಸಬೇಕು ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದರು.

ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಪ್ರಕೃತಿ ಕಾಲೋನಿಯಲ್ಲಿ ಜರುಗಿದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಪರಿಸರ ನಾಶದಿಂದಾಗಿ, ಸರಿಯಾಗಿ ಮಳೆಯಾಗುತ್ತಿಲ್ಲ, ಬೆಳೆಗಳು ಬರುತ್ತಿಲ್ಲ, ಬಂದರೂ ಸರಿಯಾಗಿ ಇಳುವರಿ ಕೊಡುತ್ತಿಲ್ಲ. ಹವಾಮಾನ ವೈಪರೀತ್ಯದಿಂದಾಗಿ, ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಹೀಗೆ ಮುಂದುವರೆದರೆ, ಮುಂದೊಂದು ದಿನ ಮನುಷ್ಯರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಬೇಕು, ಪ್ರಕೃತಿ ಸಮತೋಲನ ಕಾಪಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

Advertisements

ಮುಖ್ಯ ಅತಿಥಿ ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಮಾತನಾಡಿ, “ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸಬೇಕು. ಅರಣ್ಯ ಕೃಷಿ ಮಾಡಬೇಕು, ಅರಣ್ಯ ಕೃಷಿ ಮಧ್ಯದಲ್ಲಿ ಅಂತರ ಬೇಸಾಯ ಮಾಡಬೇಕು. ಹಣ್ಣಿನ ಗಿಡ ಮರಗಳನ್ನು ಹೆಚ್ಚೆಚ್ಚು ಬೆಳಸಬೇಕು, ಸಾವಯವ, ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಲೋಟಸ್ ಕಾಲೇಜಿನಿಂದ ವಿಶ್ವ ತಂಬಾಕುರಹಿತ ದಿನ; ಜನ ಜಾಗೃತಿ ಜಾಥಾ

ಚಂದ್ರಶೇಖರ್ ಜಮಖಂಡಿ, ಮಹಾನಗರ ಪಾಲಿಕೆ ಸದಸ್ಯ ಮುಳಗೌಡ ಬಿರಾದಾರ ಮಾತನಾಡಿದರು. ಬಿಕೆ ಶೋಭಾ ಸ್ವಾಗತಿಸಿದರು. ಗಿರೀಶ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಬಿಕೆ ಶೈಲಾ ವಂದಿಸಿದರು.

ಕಾರ್ಯಕ್ರಮದಲ್ಲಿ ಬಿಕೆ ಸರೋಜಾ, ಸುವರ್ಣ, ಜಯಶ್ರೀ ಕನ್ನೂರ, ಶ್ರೀಪತಿರಾವ ಪಾಟೀಲ, ಕೆಎಸ್ ದೊಡ್ಡಮನಿ, ಬಸವರಾಜ, ರವೀಂದ್ರ ಬದ್ನಿಮಠ ಸೇರಿದಂತೆ ಬಡಾವಣೆಯ ನಾಗರಿಕರು, ವಿವಿಧ ಕೇಂದ್ರಗಳಿಂದ ಅಗಮಿಸಿದ ಈಶ್ವರಿಯ ವಿದ್ಯಾಲಯದ ಪದಾಧಿಕಾರಿಗಳು, ಆಮಂತ್ರಿತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X