ಬೀದರ್‌ | ಕನ್ನಡ ಶಾಲೆಗಳ ಉಳಿವಿಗೆ ಹೋರಾಟ; ಕಸಾಪ ಸಂಪೂರ್ಣ ಬೆಂಬಲ

Date:

Advertisements

ಕನ್ನಡ ಶಾಲೆಗಳ ಉಳಿವಿಗೆ ಬರುವ ದಿನಗಳಲ್ಲಿ ಹೋರಾಟ ನಡೆಸಲು ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಘಟಕ ಸೋಮವಾರ ಇಲ್ಲಿ ನಿರ್ಣಯಿಸಿತು.

ಬೀದರ್‌ ನಗರದ ಜಿಲ್ಲಾ ಕನ್ನಡ ಭವನದಲ್ಲಿ ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಘಟಕದ ಮುಂದಾಳತ್ವದಲ್ಲಿ ನಡೆದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಈ ಕುರಿತು ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.

ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ʼಕನ್ನಡ ಪರ ಸಂಘಟನೆಗಳ ರಾಜ್ಯ ಪ್ರಮುಖರ ಭೇಟಿಗೆ ಶೀಘ್ರದಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ನಿಯೋಗ ಬೆಂಗಳೂರಿಗೆ ಒಯ್ಯಲಾಗುವುದು. ಕನ್ನಡ ಪರ ಸಂಘಟನೆಗಳ ಪ್ರಮುಖರಿಗೆ ಕನ್ನಡ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮನವರಿಕೆ ಮಾಡಲಾಗುವುದು. ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುವುದುʼ ಎಂದು ಹೇಳಿದರು.

Advertisements

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಕನ್ನಡ ನೆಲ, ಜಲ, ಸಂಸ್ಕೃತಿಯ ಉಳಿವಿಗೆ ಕನ್ನಡ ಶಾಲೆಗಳ ಉಳಿವು ಬಹಳ ಅವಶ್ಯಕವಾಗಿದೆ. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಲು ನಡೆಸುವ ಎಲ್ಲ ಹೋರಾಟಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಸಂಪೂರ್ಣ ಬೆಂಬಲ ನೀಡಲಿದೆʼ ಎಂದು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್, ಜಯ ಕರ್ನಾಟಕ ಜನ ಪರ ವೇದಿಕೆಯ ಸಂಜು ಡೊಳ್ಳೆ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಪೀಟರ್ ಚಿಟಗುಪ್ಪ, ಕನ್ನಡ ಸೇನೆ ಕರ್ನಾಟಕದ ಜಿಲ್ಲಾಧ್ಯಕ್ಷ ರವಿ ಸ್ವಾಮಿ ನಿರ್ಣಾ, ಸಾಹಿತಿಗಳಾದ ಎಸ್.ಎಂ. ಜನವಾಡಕರ್, ಶಿಕ್ಷಣ ತಜ್ಞ ಸೋಮನಾಥ ಮುದ್ದಾ, ಗುರುನಾಥ ದೇಶಮುಖ ಸಂತಪುರ, ಬಸವರಾಜ ಶೆಟಕಾರ್ ಔರಾದ್, ಮಾಣಿಕಪ್ಪ ಗೋರನಾಳೆ ಮಾತನಾಡಿದರು.

ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಅಧ್ಯಕ್ಷ ರಾಜೇಂದ್ರ ಮಣಗೇರಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್‍ನ ರೂಪಾ ಪಾಟೀಲ್‌, ಶಿವಲೀಲಾ ಬಂಡೆ, ವಿನಯಕುಮಾರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X