ವೃತ್ತಿಪರ ಸಂಸ್ಥೆಯೊಳಗೆ ವ್ಯವಸ್ಥಿತವಾಗಿ ನುಸುಳುತ್ತಿರುವ ಆರ್‌ಎಸ್‌ಎಸ್‌: ಕಾಂಗ್ರೆಸ್

Date:

Advertisements

ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ ನಡೆದ 14 ಕೋಟಿ ರೂ. ಹಗರಣವನ್ನು ಉಲ್ಲೇಖಿಸಿ. ವೃತ್ತಿಪರ ಸಂಸ್ಥೆಗಳಲ್ಲಿ ಆ‌ರ್‌ಎಸ್‌ಎಸ್‌ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಹಗರಣದ ಕುರಿತ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮಾತನಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘2014ರಿಂದ ವೃತ್ತಿಪರ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ. ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ(ಐಸಿಎಚ್‌ಆರ್) ಅದಕ್ಕೊಂದು ಉದಾಹರಣೆ’ ಎಂದಿದ್ದಾರೆ.

‘ಐಸಿಎಚ್‌ಆರ್ ನಡೆದ ಅಕ್ರಮಗಳ ಬಗ್ಗೆ ಕೇಂದ್ರ ಜಾಗೃತ ದಳ(ಸಿವಿಸಿ) ತನಿಖೆ ನಡೆಸುತ್ತಿದ್ದು, ಆ‌ರ್‌ಎಸ್‌ಎಸ್‌ನ ಅಖಿಲ ಭಾರತೀಯ ಇತಿಹಾಸ್ ಸಂಕಲನ್ ಯೋಜನೆ’ (ಎಬಿಐಎಸ್‌) ಸದಸ್ಯರ ಮೇಲೆ ದೋಷಾರೋಪಣೆ ಮಾಡಿದೆ. ಇದು ಬರೋಬ್ಬರಿ 214 ಕೋಟಿ ಹಗರಣ, ಐಸಿಎಚ್‌ಆರ್‌ಗೆ ಇದು ದೊಡ್ಡ ಮೊತ್ತವಾಗಿದೆ’ ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಥಳೀಯ ಸರ್ಕಾರಗಳ ಚುನಾವಣೆ ವಿಳಂಬ; ಕಾಂಗ್ರೆಸ್ ನಡೆ ಸಂವಿಧಾನ ವಿರೋಧಿಯಲ್ಲವೇ?

‘ಐಸಿಎಚ್‌ಆರ್‌ ಒಂದೇ ಅಲ್ಲ. ಉನ್ನತ ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಸಂಸ್ಥೆಗಳನ್ನು ಆ‌ರ್‌ಎಸ್‌ಎಸ್‌ ಬೆಂಬಲಿಗರು ನಾಶಪಡಿಸುತ್ತಿದ್ದಾರೆ. ಇದರಲ್ಲಿ ಅಚ್ಚರಿಪಡುವಂತದ್ದು ಏನಿಲ್ಲ’ ಎಂದು ಹೇಳಿದ್ದಾರೆ.

ಐಸಿಎಚ್‌ಆರ್‌ನಲ್ಲಿ ನಡೆದ 214 ಕೋಟಿ ಹಗರಣವನ್ನು ಸಿವಿಸಿ ತನಿಖೆ ನಡೆಸುತ್ತಿದ್ದು ಎಬಿಐಎಸ್‌ವೈನ ಕೆಲವು ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X