ಯಾದಗಿರಿ ನಗರಸಭೆಯಲ್ಲಿ ಅಕ್ರಮ ನೋಂದಣಿ : ಮೂವರ ಸಿಬ್ಬಂದಿ ಬಂಧನ

Date:

Advertisements

ಬೇರೆಯವರ ಹೆಸರಿಗೆ ಅಕ್ರಮವಾಗಿ ನಿವೇಶನ ನೋಂದಣಿ ಮಾಡಿಕೊಟ್ಟು, ದಾಖಲೆಗಳನ್ನು ನಾಶಪಡಿಸಲು ಮುಂದಾಗಿದ್ದ ಆರೋಪದಡಿ ಯಾದಗಿರಿ ನಗರಸಭೆಯ ಇಬ್ಬರು ಹಾಗೂ ಶಹಾಪುರದ ನಗರಸಭೆಯ ಒಬ್ಬ ಸಿಬ್ಬಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಯಾದಗಿರಿ ನಗರಸಭೆಯ ಕಂದಾಯ ನಿರೀಕ್ಷಕ ಮಾನಪ್ಪ ಬಡಿಗೇರ, ಪ್ರಭಾರ ಆರ್‌ಐ ಮೈನೋದ್ದೀನ್ ಮಹಮ್ಮದ್‌ ಹಜರತ್‌ ಹಾಗೂ ಶಹಾಪುರ ನಗರಸಭೆಯಲ್ಲಿ ನೀರು ಸರಬರಾಜು ವಿಭಾಗದ ಮೇಲ್ವಿಚಾರಕ ಹಣಮಂತಪ್ಪ ಆಶನಾಳ ಬಂಧಿತರು ಎಂದು ತಿಳಿದು ಬಂದಿದೆ.

ಮಲ್ಲಮ್ಮ ಎಂಬುವವರಿಗೆ ನಿವೇಶನವನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶವಾಗಿದೆ. ಈ ವಿಷಯ ತಿಳಿದ ಈ ಮೂವರು ಸಿಬ್ಬಂದಿ ರಜೆ ದಿನವಾದ ಭಾನುವಾರ (ಜೂ.1) ಅಕ್ರಮವಾಗಿ ನಗರಸಭೆ ಕಚೇರಿಗೆ ನುಗ್ಗಿ ಅಲ್ಲಿನ ದಾಖಲೆಗಳನ್ನು ಮರೆಮಾಚಿ ನಾಶಪಡಿಸುವ ಹುನ್ನಾರಕ್ಕೆ ಮುಂದಾಗಿದ್ದಾರೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತ ಉಮೇಶ ಚವಾಣ್‌ ಅವರು ನಗರ ಠಾಣೆಗೆ ದೂರು ನೀಡಿದ್ದರು.

Advertisements

ಯಾದಗಿರಿ ಸೀಮಾಂತರದ ಸರ್ವೆ ನಂ.151ರಲ್ಲಿನ ನಿವೇಶನ ಸಂಖ್ಯೆ 42 ಅನ್ನು ಮಲ್ಲಮ್ಮ ರಾಮಣ್ಣ ಅವರ ಹೆಸರಿಗೆ ಮಾಡಿಕೊಟ್ಟಿದ್ದ ಈ ಮೂವರು, ಭಾನುವಾರ ಸಂಜೆ 4ರ ಸುಮಾರಿಗೆ ನಗರಸಭೆ ಕಚೇರಿಗೆ ಬಂದು, ಅಲ್ಲಿದ್ದ ಕಾವಲುಗಾರ ತಿಪ್ಪಣ್ಣ ಅವರನ್ನು ಬೆದರಿಸಿ ಕಚೇರಿ ಬೀಗ ತೆಗೆದುಕೊಂಡು ಕೋಣೆಗಳಿಗೆ ಹೋಗಿ ಹಲವು ಕಡತಗಳನ್ನು ಪರಿಶೀಲಿಸಿ ಅಕ್ರಮ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ವೇಳೆ ಒಬ್ಬ ಸಾರ್ವಜನಿಕ ವ್ಯಕ್ತಿ ಅಲ್ಲಿರುವುದು ಕಾಣಿಸಿದೆ ಎಂದು ನಗರಸಭೆ ಪೌರಾಯುಕ್ತರು ದೂರಿನಲ್ಲಿ ತಿಳಿಸಿದ್ದಾರೆ

ಇದನ್ನೂ ಓದಿ : ಕಲಬುರಗಿ | ಆನ್‌ಲೈನ್ ಗೇಮಿಂಗ್‌ : ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X