ಐಪಿಎಲ್ ಫೈನಲ್‌ | ಆರ್‌ಸಿಬಿ ಗೆದ್ದರೆ ಸಂಭ್ರಮ ಇರಲಿ, ಅತಿರೇಕದ ವರ್ತನೆ ಬೇಡ: ಪೊಲೀಸ್ ಕಮಿಷನರ್

Date:

Advertisements

ಐಪಿಎಲ್ ಸೀಸನ್-18ರ ಮಹಾಸಮರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಟ್ರೋಫಿಗಾಗಿ ಸೆಣಸಲಿದೆ.

ಈ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್​ಸಿಬಿ ತಂಡ ಗುರುತಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಫೈನಲ್‌ ಪಂದ್ಯದ ಕಾತುರ ಹೆಚ್ಚಾಗಿದೆ. ಆರ್‌ಸಿಬಿ ಗೆದ್ದು ಬೀಗಿದರೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇಲ್ಲ.

ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಮಾಡಬಾರದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

Advertisements

ಆರ್​ಸಿಬಿ ಗೆದ್ದರೆ ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ. ರಸ್ತೆ ತಡೆಯುವುದು, ಟೈರ್​ಗೆ ಬೆಂಕಿ ಹಚ್ಚುವುದು, ವಾಹನ ತಡೆಯುವುದು. ಸಾರ್ವಜನಿಕರಿಗೆ ತೊಂದರೆ, ಶಾಂತಿಭಂಗ ಉಂಟು ಮಾಡುವಂತಿಲ್ಲ. ಇಂತಹ ಘಟನೆಗಳು ಕಂಡುಬಂದಲ್ಲಿ ಕಾನೂನುಕ್ರಮ ಕೈಗೊಳ್ಳಲು ಡಿಸಿಪಿ, ಎಸಿಪಿಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್‌ ಫೈನಲ್‌ಗಿಂತ ಹೆಚ್ಚಾದ ಆರ್‌ಸಿಬಿ ಜ್ವರ, ಏನಿದು ವಿದ್ಯಮಾನ?

ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಲು ಸೂಚಿಸಿಲಾಗಿದೆ. ಎಂ.ಜಿ.ರಸ್ತೆ, ಕೋರಮಂಗಲ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನಿಗಾ ಹೆಚ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್​​ ಅಳವಡಿಕೆ ಮಾಡುವಂತಿಲ್ಲ ಎಂದು ಕಮಿಷನರ್ ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ.

ಪಬ್, ಕ್ಲಬ್, ರೆಸ್ಟೋರೆಂಟ್​​​ ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್ ​​​ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲೆಡೆ ಹೊಯ್ಸಳ ಮತ್ತು ಬೀಟ್ ಪೊಲೀಸರು ಗಸ್ತು ಕಾರ್ಯಾಚರಣೆ ಹೆಚ್ಚಿಸಿ ನಿಗಾ ವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X