ಸರ್ಕಾರದಿಂದ ಹೇಮಾವತಿ ನದಿ ನೀರಿನ ಹೋರಾಟ ಹತ್ತಿಕ್ಕುವ ಕಾರ್ಯ: ಬಿ ವೈ ವಿಜಯೇಂದ್ರ ಆರೋಪ

Date:

Advertisements

ರೈತರ ಹಕ್ಕನ್ನು ಮೊಟಕುಗೊಳಿಸುವ ಕೆಲಸವು ರಾಜ್ಯ ಸರಕಾರಕ್ಕೆ ಶೋಭೆ ತರುವುದಿಲ್ಲ. ರಾಜ್ಯ ಸರಕಾರವು ಹೇಮಾವತಿ ನದಿ ನೀರಿನ ವಿಚಾರದಲ್ಲಿ ರೈತರ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ. ಪೊಲೀಸರ ಮೂಲಕ ಗೂಂಡಾಗರ್ದಿ ಮಾಡಿ ಹೋರಾಟ ಹತ್ತಿಕ್ಕುವ ಕಾರ್ಯ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಯಾರೋ ಒಬ್ಬರೋ ಇಬ್ಬರೋ ಕಲ್ಲು ಹೊಡೆದಿರಬಹುದು; ಅದು ಸರಿ ಎನ್ನುವುದಿಲ್ಲ. ಪೊಲೀಸರು ನಮ್ಮ ರಾಜ್ಯದ ಆಸ್ತಿ. ಆದರೆ, ಯಾರೋ ಒಬ್ಬರೋ ಇಬ್ಬರೋ ಕಲ್ಲು ಹೊಡೆದರೆಂದು ನಮ್ಮ ಕಾರ್ಯಕರ್ತರನ್ನು ಹಾಗೂ ರೈತ ಮುಖಂಡರನ್ನು ಟಾರ್ಗೆಟ್ ಮಾಡಿ, ಅವರನ್ನು ಒಳಗೆ ಹಾಕುವ ಕುತಂತ್ರ ನಡೆಯುತ್ತಿದೆ. ಇದರಿಂದ ಹೇಮಾವತಿ ನದಿ ನೀರಿನ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ತಿಳಿಸಿದರು.

“ಸರಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ- ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ. ಈ ವಿಷಯವಾಗಿ ನಿನ್ನೆ ರಾತ್ರಿ ರಾಷ್ಟ್ರೀಯ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಇವತ್ತು ನಮ್ಮ ಸಂಸದರು, ಶಾಸಕರು ಪೊಲೀಸ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ” ಎಂದರು.

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವರ ಗಡೀಪಾರು ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, “ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರಕಾರವು ಅಧಿಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವವನ್ನು ಹಂಗಿಸುವಂತೆ ಸಿದ್ದರಾಮಯ್ಯರ ನೇತೃತ್ವದ ಸರಕಾರವು ತುಘಲಕ್ ದರ್ಬಾರ್ ನಡೆಸುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಸರ್ಕಾರದ ‘ಗೃಹ ಆರೋಗ್ಯ’ ಮತ್ತೊಂದು ಗ್ಯಾರಂಟಿ ಯೋಜನೆಯೇ?

“ಕಳೆದ ಕೆಲವು ತಿಂಗಳಿನಿಂದ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರದ ವರ್ತನೆಯನ್ನು ತಾವು ಗಮನಿಸಿ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲವೆಂದು ಜನಾಕ್ರೋಶ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲೇ ಮತ್ತೊಂದು ಕಡೆ ಸರಕಾರದ ಹುಳುಕು ಮುಚ್ಚಿ ಹಾಕಿಕೊಳ್ಳಲು ಇಂಥ ಘಟನೆಗಳು ನಡೆಯುತ್ತಿವೆ. ಸರಕಾರವು ಕೂಡ ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಮಾಡುತ್ತಿದೆ” ಎಂದು ಆಕ್ಷೇಪಿಸಿದರು.

“ಸುಹಾಸ್ ಹತ್ಯೆ ನಡೆದಾಗ ಗೃಹ ಸಚಿವರು ಸುಹಾಸ್ ಮನೆಗೆ ಹೋಗದಂತೆ ಕೆಲವು ದುಷ್ಟ ಶಕ್ತಿಗಳು ಅವರನ್ನು ತಡೆದಿದ್ದವು. ಸುಹಾಸ್ ಶೆಟ್ಟಿ ಹತ್ಯೆ ಆದಾಗ ಮಹಿಳೆಯರೂ ಅದರಲ್ಲಿ ಭಾಗಿಯಾಗಿದ್ದರು. ಇದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. 3-4 ಜನ ಮಹಿಳೆಯರು ರಸ್ತೆಯಲ್ಲಿ ನಿಂತು ಕೊಲೆಗಡುಕರು, ದೇಶದ್ರೋಹಿಗಳನ್ನು ಕಾರಿನಲ್ಲಿ ಕೂರಿಸಿ, ಪರಾರಿ ಆಗಲು ಸಹಕರಿಸಿದ್ದರು ಎಂದು ವಿವರಿಸಿದರು. ಅದರ ಕುರಿತು ಏನಾಗಿದೆ? ಅವರನ್ನು ಬಂಧಿಸಿದ್ದಾರಾ” ಎಂದು ಪ್ರಶ್ನಿಸಿದರು.

“ನಮ್ಮ ರಾಜ್ಯದಲ್ಲಿ ಚುನಾಯಿತ ಸರಕಾರ ಇದೆ; ಪೊಲೀಸರು ಕಾನೂನು- ಸುವ್ಯವಸ್ಥೆ ಕಾಪಾಡುತ್ತಿದ್ದಾರೆ ಎಂಬ ನಂಬಿಕೆ ಬರುತ್ತಿಲ್ಲ. ಇದರ ನಡುವೆ ಸಂಘ ಪರಿವಾರದ ಹಿರಿಯರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಹಿಂದೂ ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ ಕುತಂತ್ರ ನಡೆಯುತ್ತಿದೆ. ಮಧ್ಯರಾತ್ರಿ ಕಾರ್ಯಕರ್ತರ ಮನೆಯ ಬಾಗಿಲು ತಟ್ಟಿ, ಅವರನ್ನು ವಿಚಾರಿಸುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವಾ?” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X