ವಿಜಯಪುರ | ಬಸವಣ್ಣನ ವಚನಗಳೇ ಕಾನೂನು: ಹಿರಿಯ ನ್ಯಾ. ವಿದ್ಯಾವತಿ ಅಂಕಲಗಿ

Date:

Advertisements

12ನೇ ಶತಮಾನದ ಬಸವಾದಿ ಶರಣರ ವಚನಗಳಲ್ಲಿ ಧರ್ಮ ಮತ್ತು ಕಾನೂನು ಬೇರೆಯಲ್ಲ. ಬಸವಣ್ಣನವರ ವಚನಗಳೇ ಕಾನೂನು. ಎಲ್ಲರಿಗೂ ಸಮಾನತೆ ತಂದು ಕೊಟ್ಟಿವೆ ಎಂದು ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಗಿ ಹೇಳಿದರು.

ವಿಜಯಪುರ ನಗರದ ವೀರಶೈವ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಗೋಷ್ಠಿಯಲ್ಲಿ ʼಶರಣರ ವಚನಗಳಲ್ಲಿ ಕಾನೂನುʼ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

“ವಚನಗಳು ದೇಶದ ನ್ಯಾಯ ಸಂಹಿತೆಯಲ್ಲಿ ಕಾನೂನುಗಳ ಕಲಂಗಳಲ್ಲಿ ಅಡಕವಾಗಿವೆ. ಅವೆಲ್ಲವೂ ಮಹಿಳೆಯರಿಗೆ ಸಮಾನತೆ ತರುವಂತಹವು, ಸಮಾಜದ ಒಳತಿಗಾಗಿ ರಚಿಸಿದಂತಹವು. ಧರ್ಮ ಮತ್ತು ಕಾನೂನು ಬೇರೆಯಲ್ಲ, ಅವುಗಳನ್ನು ಸತ್ಯ, ನಿಷ್ಠೆ, ಪ್ರಾಮಾಣಿಕತೆಯಿಂದ ಪಾಲಿಸಬೇಕು” ಎಂದರು.

Advertisements

ನ್ಯಾಯವಾದಿ ಶ್ರೀಕಾಂತ ಎಸ್ ಶಿರಡೋಣ ಮಾತನಾಡಿ, “ದೇಶದಲ್ಲಿ ಒಟ್ಟು 1860 ಕಾನೂನುಗಳು ಜಾರಿಯಲ್ಲಿದ್ದು, ಅವು ಎಲ್ಲವೂ ಶರಣರ ವಚನದಿಂದ ಬಂದದ್ದು. ವಚನಗಳು ಎಲ್ಲ ಕಾನೂನಿನ ಮೇಲೆ ಪ್ರಭಾವ ಬೀರಿವೆ” ಎಂದರು.

ಇದನ್ನೂ ಓದಿ: ವಿಜಯಪುರ | ಕೃಷಿ ಉಪಕರಣಗಳ ಸಮರ್ಪಕ ಪೂರೈಕೆಗೆ ರೈತ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಲಿಂಗಾಯತ ಜಿಲ್ಲಾಧ್ಯಕ್ಷ ವಿ ಸಿ ನಾಗಠಾಣ, ಬಿ ಟಿ ಈಶ್ವರಗೊಂಡ, ಉಪಾಧ್ಯಕ್ಷ ನಾಡಗೌಡರ, ಸಾಹಿತಿ ಸಂಗಮೇಶ ಬಾದಾಮಿ, ನ್ಯಾಯವಾದಿ ಕೆ ಎಫ್ ಅಂಕಲಗಿ, ದ ಕಣಬೂರ, ದೊಡ್ಡಣ್ಣ ಭಜಂತ್ರಿ, ಎಂ ಜಿ ಯಾದವಾಡ, ಮಹಾದೇವ ಹಾಲಳ್ಳಿ, ಜಗದೀಶ ಮೋಟಗಿ, ಎಸ್ ಎನ್ ಶಿವಣಗಿ, ಜಂಬುನಾಥ ಕಂಚ್ಯಾಣಿ, ಡಾ. ಸಂಗಮೇಶ ಮೇತ್ರಿ, ಡಾ. ರಮೇಶ ತೇಲಿ, ಶರಣಗೌಡ ಪಾಟೀಲ, ಮಲ್ಲಿಕಾರ್ಜುನ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X