‘ಪ್ರೀಮಿಯಂ ನಿಮ್ಮದು, ಲಾಭ ಅದಾನಿಗೆ’; ಎಲ್‌ಐಸಿಯ 5,000 ಕೋಟಿ ರೂ. ಹೂಡಿಕೆಗೆ ರಾಹುಲ್ ಆಕ್ಷೇಪ

Date:

Advertisements

ಅದಾನಿ ಗ್ರೂಪ್‌ನಲ್ಲಿ ಭಾರತೀಯ ವಿಮಾ ಕಂಪನಿ (ಎಲ್‌ಐಸಿ) 5,000 ಕೋಟಿ ರೂ. ಹೂಡಿಕೆ ಮಾಡಿರುವುದನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

“ಸಾರ್ವಜನಿಕರ ಹಣವನ್ನು ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ಕುಟುಕಿದ್ದಾರೆ.

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

Advertisements

ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಕಂಪನಿಯವರು ಕಳೆದ ವಾರ ನೀಡಿದ ಪ್ರಕಟಣೆಯಲ್ಲಿ, “ಎಲ್‌ಐಸಿಯಿಂದ ರೂ. 5,000 ಕೋಟಿ ಸಂಗ್ರಹಿಸಲಾಗಿದೆ” ಎಂದು ತಿಳಿಸಲಾಗಿತ್ತು.

15 ವರ್ಷಗಳ ಅವಧಿಯಲ್ಲಿ ಮರುಪಾವತಿ ಮಾಡುವ ಷರತ್ತಿನ ಮೇಲೆ, ವರ್ಷಕ್ಕೆ 7.75% ಬಡ್ಡಿ ದರದಲ್ಲಿ ಎಲ್‌ಐಸಿಯಿಂದ ಅದಾನಿ ಕಂಪನಿಯು ಹಣ ಪಡೆದುಕೊಂಡಿದೆ.

ಇದನ್ನೂ ಓದಿರಿ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಮಾಹಿತಿ ರವಾನೆ; ಗಗನ್‌ ದೀಪ್‌ ಅರೆಸ್ಟ್

“ನಮ್ಮಂತಹ ಸಾಮಾನ್ಯ ಜನರ ವಿಮಾ ಕಂತುಗಳ ಮೂಲಕ ಸಂಗ್ರಹಿಸಿದ ಎಲ್‌ಐಸಿ ಹಣವನ್ನು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ರಾಹುಲ್ ಆರೋಪಿಸಿದ್ದಾರೆ.

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ಟ್ವೀಟ್ ಮಾಡುವ ಮೂಲಕ, ಎಲ್‌ಐಸಿ ಹೂಡಿಕೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಮ್ಮ ದೇಶದ ದೊಡ್ಡ ವಿಮಾ ಕಂಪನಿ ಎಲ್‌ಐಸಿ (ಭಾರತೀಯ ಜೀವ ವಿಮಾ ನಿಗಮ). ಇದು ಸರ್ಕಾರಿ ಕಂಪನಿಯಾಗಿದ್ದು, ನಮ್ಮಂತಹ ಸಾಮಾನ್ಯ ಜನರು ಕಟ್ಟುವ ವಿಮಾ ಕಂತುಗಳಿಂದ ಸಂಗ್ರಹವಾದ ಹಣವನ್ನು ವಿವಿಧೆಡೆ ಹೂಡಿಕೆ ಮಾಡುತ್ತದೆ. ಆದರೆ ಅದಾನಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂಬ ಗಂಭೀರ ಆರೋಪಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X