ಐಪಿಎಲ್ ಫೈನಲ್‌ | ಟಾಸ್‌ ಗೆದ್ದ ಪಂಜಾಬ್; ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ

Date:

Advertisements

ಅಂತಿಮ ಘಟ್ಟ ತಲುಪಿರುವ ಐಪಿಎಲ್‌ನ ರೋಚಕ ಹಣಾಹಣಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಪಂಜಾಬ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್ ಬೌಲಿಂಗ್‌ ಆಯ್ದುಕೊಂಡಿದ್ದಾರೆ. ಆರ್‌ಸಿಬಿಯ ರಜತ್‌ ಪಾಟಿದಾರ್‌ ತಂಡ ಬ್ಯಾಟಿಂಗ್‌ ಮಾಡಲು ಸಜ್ಜಾಗಿದ್ದಾರೆ. ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಉಭಯ ತಂಡಗಳಿಂದ 11 ಆಟಗಾರರ ಪಡೆ ತಮ್ಮ ಕ್ರೀಡಾ ಪರಾಕ್ರಮ ತೋರಲು ಸಿದ್ಧರಾಗಿದ್ದಾರೆ. ತಂಡದಲ್ಲಿ ಬದಲಾವಣೆ ಇಲ್ಲದಿದ್ದರೂ ತಂತ್ರಗಾರಿಕೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರ್‌ಸಿಬಿ ನಾಯಕ ರಜತ್‌ ಹೇಳಿದ್ದಾರೆ

ಎರಡೂ ತಂಡಗಳು ಬಹಳ ಸಮಯದ ನಂತರ ಫೈನಲ್ ತಲುಪಿದ್ದು, ಇಲ್ಲಿಯವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲವಾದ್ದರಿಂದ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಅದು ಅವರ ಚೊಚ್ಚಲ ಐಪಿಎಲ್ ಪ್ರಶಸ್ತಿಯಾಗಲಿದೆ.

ಇದು ಬೆಂಗಳೂರಿನ ನಾಲ್ಕನೇ ಐಪಿಎಲ್ ಫೈನಲ್ ಆಗಲಿದೆ. ಇದಕ್ಕೂ ಮೊದಲು ತಂಡವು 3 ಬಾರಿ ಸೋಲನ್ನು ಎದುರಿಸಿದೆ. 2009 ರಲ್ಲಿ ಮೊದಲು ಡೆಕ್ಕನ್ ಚಾರ್ಜರ್ಸ್ ವಿರುದ್ಧ ಸೋಲನುಭವಿಸಿತು. ನಂತರ 2011 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ನಂತರ 2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬೆಂಗಳೂರು ತಂಡವನ್ನು ಕೇವಲ 8 ರನ್‌ಗಳ ಅಂತರದಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Advertisements

ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ಎರಡನೇ ಬಾರಿಗೆ ಫೈನಲ್ ಆಡುತ್ತಿದೆ. 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್ ಆಡಿದ್ದ ಪಂಜಾಬ್​ಗೆ ಸೋಲು ಎದುರಾಗಿತ್ತು.

ಪಂದ್ಯವಾಡುವ ಉಭಯ ತಂಡಗಳ ಆಟಗಾರರು:

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಮಯಾಂಕ್ ಅಗರ್ವಾಲ್ , ರಜತ್ ಪಾಟೀದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್.

ಪಂಜಾಬ್ ಕಿಂಗ್ಸ್ : ಪ್ರಭ್‌ಸಿಮ್ರನ್ ಸಿಂಗ್, ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಐಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯಿನಿಸ್, ಅಜಮತುಲ್ಲಾ ಒಮರ್‌ಜಾಯ್, ಕೈಲ್ ಜೇಮಿಸನ್, ಅರ್ಶದೀಪ್ ಸಿಂಗ್,  ಯುಜ್ವೇಂದ್ರ ಚಹಲ್, ವಿಜಯಕುಮಾರ್ ವೈಶಾಕ್

ಪಂದ್ಯದ ಸಮಯ: 7.30

ನೇರ ಪ್ರಸಾರ: ಜಿಯೋ ಹಾಟ್‌ ಸ್ಟಾರ್, ಸ್ಟಾರ್‌ ಸ್ಪೋರ್ಟ್ಸ್‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X