ಕೊಪ್ಪಳ | ‘ಗೃಹಲಕ್ಷ್ಮಿ’ ಹಣದಲ್ಲಿ ರಸ್ತೆ ದುರಸ್ತಿ ಮಾಡಿಸಿದ ಮಹಿಳೆ; ಗ್ರಾಮಸ್ಥರ ಮೆಚ್ಚುಗೆ

Date:

Advertisements

ಕಾಂಗ್ರೆಸ್‌ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಕೂಡಿಟ್ಟಿದ್ದ ಮಹಿಳೆಯೊಬ್ಬರು, ಆ ಹಣದಲ್ಲಿ ತಮ್ಮ ಗ್ರಾಮದ ರಸ್ತೆ ದುರಸ್ತಿ ಮಾಡಿಸಿದ್ದಾರೆ. ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಮೂಲಕ ಮಾದರಿಯಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಯರೇಹಂಚಿನಾಳ ಗ್ರಾಮದ ಮಹಿಳೆ ಸವಿತಾ ಉಮೇಶ ನಾಗರೆಡ್ಡಿ ಅವರು ತಮಗೆ ದೊರೆತ ಗೃಹಲಕ್ಷ್ಮಿ ಹಣವನ್ನು ಗ್ರಾಮಕ್ಕಾಗಿ ವ್ಯಯಿಸಿದ್ದಾರೆ. ತಮ್ಮ ಗ್ರಾಮ ಯರೇಹಂಚಿನಾಳ ಮತ್ತು ಪಕ್ಕದ ಗ್ರಾಮ ಕೊಟುಮಚಗಿ ನಡುವಿನ 4 ಕಿ.ಮೀ ರಸ್ತೆಗೆ ಚಾಚಿಕೊಂಡಂತೆ ಬೆಳೆದಿದ್ದ ಮುಳ್ಳುಕಂಟಿ, ಬೇಲಿಗಳನ್ನು ಸ್ವಚ್ಛಗೊಳಿಸಿದ್ದಾರೆ.

ಬೇಲಿಗಳು ಬೆಳೆದಿದ್ದರಿಂದ ರಸ್ತೆಯು ಬಹಳ ಕಿರಿದಾಗಿತ್ತು. ರೈತರು, ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಮಹಿಳೆ ಸವಿತಾ ಅವರು ತಮಗೆ ಗೃಹಲಕ್ಷ್ಮಿ ಯೋಜನೆಯಿಂದ ಕಳೆದ 11 ತಿಂಗಳಲ್ಲಿ ದೊರೆತಿದ್ದ 22 ಸಾವಿರ ರೂ.ಗಳನ್ನು ವ್ಯಯಿಸಿ, ಜೆಸಿಬಿ ಕರೆಸಿ, ಮುಳ್ಳುಕಂಟಿಗಳನ್ನು ತೆರವುಗೊಳಿಸಿದ್ದಾರೆ. ರಸ್ತೆಯ ಬದಿಯು ಜನರ ಬಳಕೆಗೆ ದೊರೆಯುವಂತೆ ಮಾಡಿದ್ದಾರೆ.

Advertisements

“ರಸ್ತೆ ಬದಿಯ ಮುಳ್ಳುಕಂಟಿಗಳನ್ನು ತೆರವುಗೊಳಿಸಿ, ರಸ್ತೆಯಲ್ಲಿ ದುರಸ್ತಿ ಮಾಡಿಸಬೇಕೆಂದು ಕ್ಷೆತ್ರದ ಶಾಸಕರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೆವು. ಆದರೆ, ಯಾವುದೇ ಪ್ರಯೋಜವಾಗಲಿಲ್ಲ. ರಸ್ತೆ ದುರಸ್ತಿಗೆ ಶಾಸಕರು ಆಸಕ್ತಿ ವಹಿಸಲಿಲ್ಲ. ಸವಿತಾ ಅವರು ತಮ್ಮ ಸ್ವಂತ ಹಣ ಬಳಸಿ, ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಂಡಿದ್ದಾರೆ. ಅವರ ಕೆಲಸ ಶ್ಲಾಘನೀಯ” ಎಂದು ರೈತ ಮುಖಂಡ ಅಂದಪ್ಪ ಕೋಳೂರು ಹೇಳಿರುವುದಾಗಿ ‘ಪಿವಿ‘ ವರದಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X