ದಕ್ಷಿಣ ಕನ್ನಡ | ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನ; ಮೂವರ ಬಂಧನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಆಲಂಕಾರು ಗ್ರಾಮದ ಪಜ್ಜಾಪು ಎಂಬಲ್ಲಿ ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಸವಣೂರಿನ ನಾಸೀರ್, ನವಾಜ್ ಹಾಗೂ ಸಿದ್ದಿಕ್ ತಿಂಗಳಾಡಿ ಎಂಬುವವರೇ ಬಂಧಿತ ಆರೋಪಿಗಳು. ಆರೋಪಿತರಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಹೆಬ್ಬಲಸು ಮರ ಕಡಿದಿದ್ದು, ವಿದ್ಯುತ್ ತಂತಿಗಳ ಮೇಲೆ ಅದು ಬಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಡ್ಯೂಟಿಗೆ ಹಾಕುವ ವಿಚಾರಕ್ಕೆ ಲಂಚ; ಹೋಮ್‌ ಗಾರ್ಡ್ ಕಮಾಂಡರ್‌ ಲೋಕಾಯುಕ್ತ ಬಲೆಗೆ

Advertisements

ಮರ ಬಿದ್ದ ಕಾರಣ ಸುಮಾರು 6ಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕಡಬ ನೆಲ್ಯಾಡಿ ಭಾಗದಲ್ಲಿ ಹಲವು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮೆಸ್ಕಾಂ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಅಲ್ಲದೆ, ಇದರಿಂದ ಆಗಿರುವ ನಷ್ಟವನ್ನು ಆರೋಪಿಗಳಿಂದಲೇ ಭರಿಸುವ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X