ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿದ ಕೆಎಮ್‌ಎಫ್‌

Date:

Advertisements

ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದ್ದು, ಕರ್ನಾಟಕ ಹಾಲು ಒಕ್ಕೂಟ (ಕೆಎಮ್‌ಎಫ್‌) ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

ಮೇ 22ರಂದು ಈ ದಾಖಲೆ ಸಾಧ್ಯವಾಗಿದ್ದು, ಅನುಕೂಲಕರವಾದ ಪೂರ್ವ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣದಿಂದ ದಾಖಲೆ ಸಾಧ್ಯವಾಗಿದೆ.

ಕರ್ನಾಟಕ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ ಈ ಕುರಿತು ಈ ದಿನ.ಕಾಮ್‌ ಜೊತೆ ಮಾಹಿತಿ ಹಂಚಿಕೊಂಡಿದ್ದು, “ಕೆಎಂಎಫ್ ಪ್ರಕಾರ, ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿದೆ” ಎಂದರು.

Advertisements

“ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಚೆನ್ನಾಗಿ ಆದ ಕಾರಣ ಹಸಿರು ಮೇವು ಲಭ್ಯತೆಯಿಂದ ಈ ಹಾಲು ಹೆಚ್ಚಾಗಿದೆ. ಅಲ್ಲದೇ ರಾಜ್ಯ ಸರ್ಕಾರ ರೈತರಿಗೆ ನೇರವಾಗಿ ಲಭಿಸುವ ಹಾಗೇ ಹಾಲಿನ ದರ ಏರಿಸಿದ್ದರಿಂದ ಖಾಸಗಿಯಾಗಿ ಹಾಲು ಹಾಕುವುದು ಬಿಟ್ಟು ಕೆಎಮ್‌ಎಫ್‌ಗೆ ಹಾಕುತ್ತಿದ್ದಾರೆ. 5 ರೂ. ಪ್ರೋತ್ಸಾಹ ಧನ ಸೇರಿ ಒಟ್ಟು ರೈತರಿಗೆ ಪ್ರತಿ ಲೀಟರ್‌ ಹಾಲಿಗೆ 40 ರೂ. ವರೆಗೂ ಸಿಗುತ್ತಿದೆ. ಇದರಿಂದ ಹಾಲಿನ ಉತ್ಪಾದನೆ ಅಧಿಕವಾಗಿದೆ. ಇದೇ ಮುಂಗಾರು ಮುಗಿಯುವುದರೊಳಗೆ 1 ಕೋಟಿ 30 ಲಕ್ಷ ಹಾಲು ಸಂಗ್ರಹ ಸಾಧ್ಯತೆ ಇದೆ” ಎಂದು ಶಿವಸ್ವಾಮಿ ವಿವರಿಸಿದರು.

ಬಿ. ಶಿವಸ್ವಾಮಿ
ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಸರ್ಕಾರದ ‘ಗೃಹ ಆರೋಗ್ಯ’ ಮತ್ತೊಂದು ಗ್ಯಾರಂಟಿ ಯೋಜನೆಯೇ?

ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯ ಅಂಗವಾಗಿ, ಕೆಎಂಎಫ್ ತನ್ನ ಜನಪ್ರಿಯ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ 18 ಹೊಸ ಬಗೆಯ ಕೇಕ್​ಗಳು ಮತ್ತು ಇತರ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡಿತ್ತು. ಕೆಎಂಎಫ್ ಮತ್ತು ಅದರ ಅಂಗಸಂಸ್ಥೆಗಳಾದ ಹಾಲು ಒಕ್ಕೂಟಗಳು ಈಗಾಗಲೇ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ನಂದಿನಿ ಹಲ್ವಾ, ಬ್ರೆಡ್, ಬನ್​​ಗಳು ಮತ್ತು ಐಸ್ ಕ್ರೀಮ್ ಸೇರಿದಂತೆ 150 ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಇದೀಗ ಹೊಸ ಬೇಕರಿ ಉತ್ಪನ್ನಗಳ ಸೇರ್ಪಡೆಯೊಂದಿಗೆ, ಕೆಎಂಎಫ್ ಉದ್ಯಮ ಮತ್ತಷ್ಟು ವಿಸ್ತರಣೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X