ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡಕ್ಕೆ ಸಿಎಂ, ಡಿಸಿಎಂ ಅವರಿಂದ ಸನ್ಮಾನ

Date:

Advertisements

ನಮ್ಮ ರಾಜ್ಯಕ್ಕೆ ಆರ್‌ಸಿಬಿ ತಂಡದ ಹುಡುಗರು ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, “ಪಂಜಾಬ್ ಕಿಂಗ್ಸ್ ವಿರುದ್ದ ಅಭೂತಪೂರ್ವ ಗೆಲುವು ಸಾಧಿಸಿದ ಆರ್‌ ಸಿ ಬಿ ತಂಡಕ್ಕೆ ಗೌರವ ಸಲ್ಲಿಸಲು ಸರ್ಕಾರ ಯೋಚಿಸುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

“ಆರ್ ಸಿ ಬಿ ತಂಡಕ್ಕೆ ನಾವು ಗೌರವ ಸಲ್ಲಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಗೆ ಯಾವ ರೀತಿಯಲ್ಲಿ ಸಮಸ್ಯೆ ಆಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

Advertisements

“ಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆ ಮಾಡುವ ಬಗ್ಗೆ ಆರ್ ಸಿ ಬಿ ತಂಡದವರು ಶೆಡ್ಯೂಲ್ಡ್ ಹಾಕಿಕೊಂಡಿರಬಹುದು. ಆದರೆ, ಪರಿಸ್ಥಿತಿಯನ್ನು ಇಲ್ಲಿ ನಿಯಂತ್ರಣ ಮಾಡುವವರು ನಾವಲ್ಲವೇ? ಗೃಹ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

ಮಂಗಳವಾರ ರಾತ್ರಿಯೇ ಆರ್ ಸಿ ಬಿ ಗೆಲುವನ್ನು ಜನರು ಸಂಭ್ರಮದಿಂದ ಆಚರಿಸಿದ್ದರು. ಇಂದು ವಿಕ್ಟರಿ ಪರೇಡ್ ಮೂಲಕ ಬೆಂಗಳೂರಿನ ಬೀದಿಗಳಲ್ಲಿ ಆರ್ ಸಿ ಬಿ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಲು ಸರ್ಕಾರ ಅವಕಾಶ ನೀಡುತ್ತಾರೋ ಇಲ್ಲವೋ ಎಂಬುವುದು ಇನ್ನು ಅಧಿಕೃತವಾಗಿಲ್ಲ.

ಆರ್.ಸಿ.ಬಿ ತಂಡಕ್ಕೆ ಮುಖ್ಯಮಂತ್ರಿಗಳ ಅಭಿನಂದನೆ

ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯ ಅತೀವ ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X