ಆರ್ ಸಿ ಬಿ ತಂಡದ ಐಪಿಎಲ್ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿಮಾನಿಗಳ ಶ್ಲಾಘನೆ; ಚಿತ್ರದುರ್ಗ ದಾವಣಗೆರೆಯಲ್ಲಿ ಸಂಭ್ರಮಾಚರಣೆ

Date:

Advertisements

ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು, ಈ ಮೂಲಕ ಮೊದಲ ಬಾರಿಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಪಂಜಾಬ್ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ ಜಯಭೇರಿ ಬಾರಿಸಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದು, ಆರ್ ಸಿ ಬಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. ಈ ಗೆಲುವಿನ ಹಿನ್ನೆಲೆಯಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತಡರಾತ್ರಿಯವರೆಗೂ ಮುಳುಗಿದ್ದರು.

ದಾವಣಗೆರೆ ನಗರದ ಹೈಸ್ಕೂಲು ಮೈದಾನ, ಜಯದೇವ ವೃತ್ತ, ಎಂಸಿಸಿ ಬ್ಲಾಕ್, ವಿದ್ಯಾನಗರ, ಮಂಡಿಪೇಟೆ, ರಾಂ ಅಂಡ್ ಕೋ ವೃತ್ತ ಸೇರಿದಂತೆ ಹಲವು ಕಡೆಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಗಿರಿ, ಹರಿಹರ ನಗರದ ಹಲವೆಡೆ ಮತ್ತು ಗ್ರಾಮೀಣ ಭಾಗದಲ್ಲಿ ಕೂಡ ಆರ್ ಸಿ ಬಿ ಗೆಲುವಿಗೆ ಸಂಭ್ರಮಾಚರಣೆ ನೆಡೆಸಿದರು.‌

ಚಿತ್ರದುರ್ಗದ ಹೊಳಲ್ಕೆರೆ ಗೇಟ್, ಕನಕ ವೃತ್ತ, ಗಾಯತ್ರಿ ವೃತ್ತ, ಜೆಸಿಆರ್ ಬಡಾವಣೆ, ಕೆಳಗೋಟೆ, ಸ್ಟೇಟ್ ಬ್ಯಾಂಕ್ ವೃತ್ತ ಸೇರಿದಂತೆ ಹೊಳಲ್ಕೆರೆ ನಗರದಲ್ಲಿ, ಹೊಸದುರ್ಗ, ಚಳ್ಳಕೆರೆಯ ಮುಖ್ಯ ವೃತ್ತಗಳಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು.‌

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕನ್ನಡ ಭಾಷಾವಿವಾದ, ಕಮಲ್ ಕ್ಷಮೆ ಯಾಚಿಸದಿದ್ದರೆ ಥಗ್ ಲೈಪ್ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ; ಕರವೇ

ಐಪಿಎಲ್ ಆರಂಭವಾಗಿ 18 ವರ್ಷಗಳಾದರೂ ಪ್ರತಿ ಆವೃತ್ತಿಯಲ್ಲೂ ನಿರಾಸೆ ಅನುಭವಿಸಿದ್ದ ಆರ್ ಸಿ ಬಿ 18 ವರ್ಷಗಳ ಕಾಯುವಿಕೆಗೆ ವಿರಾಮವಿಟ್ಟು ಈ ಆವೃತ್ತಿಯಲ್ಲಿ ಜಯಗಳಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ವಿಶೇಷ ಸಂಭ್ರಮ ಮೂಡಿಸಿದೆ. ಹಲವೆಡೆ ದೊಡ್ಡ ದೊಡ್ಡ ಪರದೆಗಳಲ್ಲಿ ಪಂದ್ಯ ಪ್ರದರ್ಶನ ಏರ್ಪಡಿಸಲಾಗಿತ್ತು. ಸಂಭ್ರಮಾಚರಣೆ ವೇಳೆ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದಯಾಳ್ ಸೇರಿದಂತೆ ಹಲವು ಆಟಗಾರರಿಗೆ ಜೈಕಾರ ಹಾಕಿ ತಂಡದ ಆಟಗಾರರ ಆಟವನ್ನು ಶ್ಲಾಘಿಸಿದ್ದುದು ಕಂಡು ಬಂದಿತು

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X