ಚಿಕ್ಕಬಳ್ಳಾಪುರ | ಐಪಿಎಲ್ ಸಂಭ್ರಮಾಚರಣೆ ವೇಳೆ ಗಲಾಟೆ; ಅಟ್ಟಾಡಿಸಿ ಯುವಕನ ಹತ್ಯೆ

Date:

Advertisements

ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ತಡರಾತ್ರಿ ಯುವಕನನ್ನು ಅಟ್ಟಾಡಿಸಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಐಪಿಎಲ್ ಸಂಭ್ರಮಾಚರಣೆ ವೇಳೆ ನಡೆದ ಗಲಾಟೆ ಯುವಕನ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಅಂಗಡಿಯೊಂದರ ಬೇಸ್​ಮೆಂಟ್​ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕ ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಕಾಲೊನಿಯ ಶ್ರೀಕಾಂತ್ ಎಂದು ತಿಳಿದುಬಂದಿದೆ.

ಮೃತದೇಹ ಪತ್ತೆಯಾಗಿರುವ ಸ್ಥಳದ ಹಿಂದಿನ ರಸ್ತೆಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಬೇರೆ ಸ್ಥಳದಲ್ಲಿ ಎಸೆದು ಹೋಗಿದ್ದಾರೆಂಬುದು ಪೊಲೀಸ್​ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements

ಮೃತ ಯುವಕನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮನೆಗೆ ಬಂದಿರಲಿಲ್ಲ, ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ತೀವ್ರ ಸ್ವರೂಪ ಪಡೆಯುತ್ತಿರುವ ʼಹೇಮಾವತಿʼ ಹೋರಾಟ; ಎಸ್ಪಿ ಕಚೇರಿ ಮುಂದೆ ಬಿಜೆಪಿ ಶಾಸಕರ ಧರಣಿ

ಸ್ಥಳಕ್ಕೆ ‌ಚಿಕ್ಕಬಳ್ಳಾಪುರ ಎಸ್​ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಕಟ್ಟಡ ಬೇಸ್​ಮೆಂಟ್​ನಲ್ಲಿ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿದ್ದು, 29 ವರ್ಷದ ಶ್ರೀಕಾಂತ್ ಎಂದು ತಿಳಿದುಬಂದಿದೆ. ಶವದ ಪಕ್ಕದಲ್ಲಿ ಕಲ್ಲು ಪತ್ತೆಯಾಗಿದೆ. ಇದರಿಂದ ಕಲ್ಲಿನಿಂದ ಜಜ್ಜಿ ಸಾಯಿಸಿರುವುದು ಕಂಡುಬರುತ್ತದೆ. ಸಾಕ್ಷ್ಯಾಧಾರಗಳನ್ನು ಕಲೆ ಹಾಕಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳ ದೃಶ್ಯಗಳನ್ನು ಪರಿಶೀಲನೆ ಮಾಡಲಾಗಿದೆ. ಮರಣೋತ್ತರ ಪರೀಕೆಗೆ ಶವವನ್ನು ಕಳುಹಿಸಲಾಗಿದೆ. ಶೀಘ್ರವೇ ಆರೋಪಿಗಳ ಪತ್ತೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X