ರಾಯಚೂರು | ಸರ್ಕಾರಿ ಶಾಲೆ ದುರಸ್ತಿ ಮತ್ತು ಕುಡಿಯುವ ನೀರು ಸೌಲಭ್ಯಕ್ಕೆ ಆಗ್ರಹ

Date:

Advertisements

ದೇವದುರ್ಗ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಹಾಗೂ ತಾಲೂಕಿನ ಗುಂಟ್ರಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಚಾವಣಿ ಬೀಳುವ ಹಂತದಲ್ಲಿದೆ. ಅದನ್ನು ದುರಸ್ತಿ ಮಾಡಿಸಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನ ಸೇನೆ (ಎಎಸ್‌ಎಸ್‌) ಕಾರ್ಯಕರ್ತರು ಆಗ್ರಹಿಸಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಂಘಟನೆಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ನಂತರ ಮಕ್ಕಳಿಗೆ ಕುಡಿಯಲು ನೀರಿಲ್ಲದಂತಾಗಿದೆ. ನಲ್ಲಿಯಲ್ಲಿ ಬರುವ ನೀರು ಉಪ್ಪಾಗಿದ್ದು, ಆ ನೀರನ್ನು ಕುಡಿದು ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಶಾಲೆಗೆ ನೀರು ಫಿಲ್ಟರ್‌ ಮಶಿನ್ ಅಳವಡಿಸಬೇಕು,” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಗುಂಟ್ರಾಳದ ಸರ್ಕಾರಿ ಶಾಲೆಯ ಮೇಲ್ಚವಾಣಿ ಬೀಳುವ ಸ್ಥಿತಿಯಲ್ಲಿದೆ. ಅದನ್ನು ದುರಸ್ತಿ ಮಾಡಿಸಬೇಕು. ಈ ಬಗ್ಗೆ ಈಗಾಗಲೇ ನಾಲ್ಕು ಬಾರಿ ಮನವಿ ಸಲ್ಲಿಸಿದ್ದರೂ, ಕ್ರಮ ಕೈಗೊಂಡಿಲ್ಲ,” ಎಂದು ಕಿಡಿಕಾರಿದರು.

Advertisements

ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ, ಎರಡೂ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ, ಹೋರಾಟ ನಡೆಸಲಾಗುತ್ತದೆ ಎಂದು ಎಎಸ್‌ಎಸ್‌ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಸಂಘಟನೆಯ ಮಲ್ಲಪ್ಪ ಗೌಡೂರು, ಬಸವರಾಜ ಜಾಲಹಳ್ಳಿ, ಬಾಳಪ್ಪ ಭಾವಿಮನಿ, ಅಮಾತೆಪ್ಪ ಜೋಳದಹೆಡ್ಗಿ, ಭೀಮಶಪ್ಪ ಗುಂಟ್ರಾಳ, ದುರುಗಪ್ಪ ಸಮುದ್ರ, ಯಲ್ಲಪ್ಪ ಕರಿಗುಡ್ಡ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X