ಮಾರ್ಚ್ 1, 2027 ರಿಂದ ಕೇಂದ್ರದಿಂದ ಜಾತಿ, ಜನ ಗಣತಿ; ಕೆಲ ರಾಜ್ಯಗಳಲ್ಲಿ ಮುಂದಿನ ವರ್ಷದಿಂದ ಪ್ರಾರಂಭ

Date:

Advertisements

ದೇಶದ ಜನಸಂಖ್ಯೆಯ ಸಮಗ್ರ ಎಣಿಕೆ ಮತ್ತು ನಿರ್ಣಾಯಕವಾದ ಸಾಮಾಜಿಕ, ಆರ್ಥಿಕ ವಿವರಗಳನ್ನು ಒಳಗೊಂಡ ಜನಗಣತಿ ಹಾಗೂ ಜಾತಿ ಗಣತಿ ಮಾರ್ಚ್ 1, 2027 ರಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆದಾಗ್ಯೂ, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ಗಳಲ್ಲಿ ಅಕ್ಟೋಬರ್ 2026 ರ ಆರಂಭದಲ್ಲಿ ಜಾತಿ ಹಾಗೂ ಜನಗಣತಿ ಪ್ರಾರಂಭವಾಗಲಿದೆ.

ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು. ದೇಶಾದ್ಯಂತ ಪುರುಷರು ಮತ್ತು ಮಹಿಳೆಯರಿಗೆ ಕೇಳಲಾಗುವ ಪ್ರಶ್ನೆಗಳಲ್ಲಿ ಜಾತಿ ಮತ್ತು ಉಪಜಾತಿಗಳ ಪ್ರಶ್ನೆಗಳ ಪಟ್ಟಿಯು ಒಳಗೊಂಡಿರುತ್ತದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ

ಸರ್ಕಾರವು ಜಾತಿಯ ಕುರಿತಾದ ಪ್ರಶ್ನೆಗಳನ್ನು ಅಂದರೆ, ವಿವಿಧ ಜಾತಿಗಳು ಮತ್ತು ಉಪ-ಜಾತಿಗಳ ಎಣಿಕೆ ಮತ್ತು ಪ್ರತಿ ಜಾತಿಯಲ್ಲಿರುವ ಜನರ ಸಂಖ್ಯೆ – ಮುಂದಿನ ಜನಗಣತಿಯ ಭಾಗವಾಗುವುದನ್ನು ಕಳೆದ ಏಪ್ರಿಲ್ 30 ರಂದು ದೃಢಪಡಿಸಿತ್ತು.

ಕೆಲ ವರ್ಷಗಳ ಹಿಂದೆ ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಆರಂಭವಾಗುವ ಮೊದಲು ಜಾತಿ ಗಣತಿ ನಡೆಸುವುದಾಗಿ ಘೋಷಿಸಲಾಗಿತ್ತು. ಜಾತಿ ಗಣತಿ ನಡೆಸಿದ ನಂತರ ಶೇ 63 ಕ್ಕಿಂತ ಹೆಚ್ಚು ಜನಸಂಖ್ಯೆಯು ಅತ್ಯಂತ ಹಿಂದುಳಿದ ಅಥವಾ ಹಿಂದುಳಿದ ವರ್ಗದವರು ಎಂದು ತಿಳಿದುಬಂದಿತ್ತು.

ಭಾರತದಲ್ಲಿ ಸಾಮಾನ್ಯವಾಗಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಕೊನೆಯ ರಾಷ್ಟ್ರೀಯ ಜನಸಂಖ್ಯಾ ಎಣಿಕೆ 2011 ರಲ್ಲಿ ನಡೆಸಲಾಗಿತ್ತು. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 2021 ರ ಜನಗಣತಿಯನ್ನು ಕೈಬಿಡಬೇಕಾಯಿತು. ಆದ್ದರಿಂದ 2027 ರ ಜನಗಣತಿಯು 16 ವರ್ಷಗಳ ನಂತರ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X