ದಾವಣಗೆರೆ | ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದೆ ಸ್ಮಶಾನ ಭೂಮಿ; ಖಾತೆ ವರ್ಗಾವಣೆಗೆ ದಲಿತರ ಆಗ್ರಹ

Date:

Advertisements

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬ ಮಾತಿನಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ, ತಮ್ಮ ಹೆಸರಿನಲ್ಲಿರುವ ಜಾಗವನ್ನು ಬಿಟ್ಟುಕೊಡಲು ಖಾಸಗಿ ವ್ಯಕ್ತಿ ಸಮ್ಮತಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಮಶಾನ ಭೂಮಿ ಪಾಳುಕೊಂಪೆಯಾಗಿ ಮಾರ್ಪಟ್ಟಿದೆ ಎನ್ನುತ್ತಾರೆ ಸಂತೆಬೆನ್ನೂರು ಗ್ರಾಮದ ದಲಿತ ನಿವಾಸಿಗಳು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದ ದಲಿತರಿಗಾಗಿ ಸರ್ವೇ ನಂ. 232ರಲ್ಲಿ 56 ಗುಂಟೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿದೆ. ಹಲವಾರು ವರ್ಷಗಳಿಂದ ಗ್ರಾಮದ ದಲಿತರು ತಮ್ಮ ಸಮುದಾಯದಲ್ಲಿ ಮೃತಪಟ್ಟವರನ್ನು ಅದೇ ಭೂಮಿಯಲ್ಲಿ ಸಂಸ್ಕಾರ ಮಾಡುತ್ತಾ ಬಂದಿದ್ದಾರೆ. ಆದರೆ, ಆ ಭೂಮಿ ಇನ್ನೂ ಕೂಡ ಗ್ರಾಮದ ಪ್ರಬಲ ಜಾರಿಗೆ ಸೇರಿದ ಇಬ್ಬರು ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ.

56 ಗುಂಟೆ ಸ್ಮಶಾನ ಭೂಮಿಯ ಪೈಕಿ ಅವರಿಬ್ಬರ ಹೆಸರಿನಲ್ಲಿ ತಲಾ 28 ಗಂಟೆ ಭೂಮಿ ಸೇರಿಕೊಂಡಿದೆ. ಅವರಿಬ್ಬರಲ್ಲಿ ಒಬ್ಬರು ಯಾವುದೇ ತಕರಾರು ಇಲ್ಲದೆ, ಭೂಮಿಯನ್ನು ವರ್ಗಾಯಿಸುವುದಾಗಿ ಹೇಳಿದ್ದಾರೆ. ಆದರೆ, ಮತ್ತೊಬ್ಬರು ಭೂಮಿ ಬಿಟ್ಟುಕೊಡುವುದಿಲ್ಲ, ಅಲ್ಲಿ ನಿವೇಶನ ಮಾಡುತ್ತೇವೆಂದು ಚಕಾರ ಎತ್ತಿದ್ದಾರೆ. ಪರಿಣಾಮ ಸ್ಮಶಾನ ಭೂಮಿಯು ದಲಿತರಿಗೆ ಬಳಕೆಯಾಗದೇ ಪಾಳು ಬಿದ್ದಿದೆ. ಗಿಡ-ಗಂಟಿಗಳು ಬೆಳೆದುಕೊಂಡಿವೆ. ಈಗಾಗಲೇ ಸಂಸ್ಕಾರ ಮಾಡಲಾಗಿರುವ ಹಿರಿಕರಿಗೆ ಪೂಜೆ, ಶ್ರಾದ್ಧಾ ನಡೆಸಲೂ ಕೂಡ ಸಾಧ್ಯವಾಗುತ್ತಿಲ್ಲ ಎಂದು ಗ್ರಾಮದ ದಲಿತರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

Advertisements

“ಸುಮಾರು ಎರಡು-ಮೂರು ತಲೆಮರುಗಳಿಂದ ನಮ್ಮ ಸಮುದಾಯದವರಲ್ಲಿ ಮೃತಪಟ್ಟಿವರಿಗೆ ಆ ಜಾಗದಲ್ಲಿಯೇ ಅಂತ್ಯಸಂಸ್ಕಾರ ಮಾಡುತ್ತಾ ಬಂದಿದ್ದೇವೆ. ಆದರೆ, ಈಗ ಸಮಸ್ಯೆ ಎದುರಾಗಿದೆ. ನಮ್ಮಲ್ಲಿ ಯಾರಾದರೂ ಮೃತಪಟ್ಟರೆ, ಸಂಸ್ಕಾರ ಮಾಡಲೂ ಸಾಧ್ಯವಿಲ್ಲದಂತಾಗಿದೆ” ಎಂದುಈದಿನ.ಕಾಮ್ ಜೊತೆ ಮಾತನಾಡಿದ ಗ್ರಾಮದ ಹಿರಿಯ ದಲಿತ ಮುಖಂಡ ರಮೇಶಪ್ಪ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮುಂದಿನ ದಿನಗಳಲ್ಲಿ ಜಗತ್ತಿನಾದ್ಯಂತ ಜಲ ಪ್ರಳಯಗಳೂ ಹೆಚ್ಚಾಗಲಿವೆ ; ನೆಮ್ಮದಿಯ ದಿನಗಳೂ ಮಾಯವಾಗಲಿವೆ

ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಹಣ ಬಿಡುಗಡೆ ಮಾಡಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಬಗೆಹರಿಯದೆ, ಭೂಮಿ ಪಾಳುಬಿದ್ದಿದೆ. ಪೂರ್ವಜರಿಗೆ ಸಂಸ್ಕಾರ ಮಾಡಲಾಗಿರುವ ಭೂಮಿಯನ್ನು ಉಳಿಸಿಕೊಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಸ್ಮಶಾನ ಭೂಮಿಯ ಸಮಸ್ಯೆ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಉಚ್ಚಂಗಿ ಪ್ರಸಾದ್, “ನೂರಾರು ವರ್ಷಗಳಿಂದಲೂ ನಮ್ಮ ಹಿರಿಯರ ಅಂತ್ಯಕ್ರಿಯೆಯನ್ನು ಈ ಜಾಗದಲ್ಲಿ ಮಾಡುತ್ತಾ ಬಂದಿದ್ದೇವೆ. ಏಕಾಏಕಿ ಇದು ನಮ್ಮದು ಎಂದು ಖಾಸಗಿ ವ್ಯಕ್ತಿಯೊಬ್ಬರು ಅಡ್ಡಿ ಉಂಟುಮಾಡಿದ್ದಾರೆ. ಭೂಮಿಯು ಹಾಳು ಕೊಂಪೆಯಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷವೇ ಇದಕ್ಕೆ ಕಾರಣ. ಕೂಡಲೇ, ಸ್ಮಶಾನ ಭೂಮಿಯನ್ನು ಜಮೀನ ಮಾಲೀಕರ ಹೆಸರಿನಿಂದ ವರ್ಗಾಯಿಸಿ, ದಲಿತರಿಗೆ ಹಸ್ತಾಂತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X