ರಾಯಚೂರು | ರಿಮ್ಸ್‌ ನಿರ್ದೇಶಕರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

Date:

Advertisements

ರಿಮ್ಸ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಸೌಲಭ್ಯಗಳು ಇಲ್ಲ. ವೈದ್ಯರು ಆಸ್ಪತ್ರೆ ಯಲ್ಲಿ ಇರುವುದಿಲ್ಲ. ಆಸ್ಪತ್ರೆಯನ್ನು ಅವ್ಯವಸ್ಥೆಯ ತಾಣವಾಗಿಸಿರುವ ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿ ರಾಯಚೂರಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ-ಭೀಮವಾದ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಿಮ್ಸ್‌ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು, “ಆಸ್ಪತ್ರೆ ಅವ್ಯವಸ್ಥೆಗಳ ಬಗ್ಗೆ ಈ ಹಿಂದೆಯೇ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಧಿಕಾರಿಗಳು ಮತ್ತು ಸಚಿವರ ಗಮನಕ್ಕೆ ತಂದಿದ್ದೆವು. ಆದರೂ, ಈವರೆಗೆ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ನರಸಿಂಹಲು, “ಆಸ್ಪತ್ರೆ ಸಮಸ್ಯೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರಿಮ್ಸ್‌ನ ವ್ಯವಸ್ಥೆ ಸುಧಾರಣೆಯಾಗದ ಕಾರಣ ಹಾಗೂ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸೌಲಭ್ಯ ದೊರೆಯದ ಕಾರಣ ಧರಣಿ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

Advertisements

“ಹೊರ ರೋಗಿ ಹಾಗೂ ಒಳ ರೋಗಿಗಳಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುವುದಿಲ್ಲ. ತರಬೇತಿ ಪಡೆಯುತ್ತಿರುವ ವೈದ್ಯರೇ ಚಿಕಿತ್ಸೆ ನೀಡುತ್ತಿದ್ದಾರೆ. ತಜ್ಞ ವೈದ್ಯರು ಬಯೋಮೆಟ್ರಿಕ್ ಹಾಜರಾತಿ ಹಾಕಿ, ತಮ್ಮ ಖಾಸಗಿ ಕ್ಲಿನಿಕ್‌ಗೆ ಹೋಗುತ್ತಾರೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಎಲ್ ವಿ ಸುರೇಶ್, ನರಸಪ್ಪ, ಆಂಜನೇಯ, ತಿಮ್ಮಪ್ಪ, ಸೈಯದ್, ಅನಿಲ್ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X