ಶಿವಮೊಗ್ಗ | ಅಜಾಗರೂಕ ಬಸ್ ಚಾಲನೆ; ಅಪಘಾತ ಓರ್ವ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್

Date:

Advertisements

ಶಿವಮೊಗ್ಗ ನಗರದಲ್ಲಿ ಬೆಳಿಗ್ಗೆ ಖಾಸಗಿ ಬಸ್‌ ಮತ್ತು ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಸುಮಾರು 10 ಜನರು ಗಾಯಗೊಂಡ ಘಟನೆ, ನಗರದ ಎಲ್‌ಎಲ್‌ಆರ್‌ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಬಸ್ ಮತ್ತು ಕಾರಿನ ನಡುವೆ ಇಂದು ಬೆಳಿಗ್ಗೆ 5-15 ರ ಸಮಯದಲ್ಲಿ ಸುಮಾರಿಗೆ ನಡೆದಿದೆ.ಕಾರಿನಲ್ಲಿದ್ದ ಬೆಂಗಳೂರು ಮೂಲದ ಪ್ರದೀಪ್‌ ಎಂಬುವವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ನಿವಾಸಿ ಪ್ರದೀಪ್ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಸೌಭಾಗ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಚಾಲಕನೊಂದಿಗೆ ಕಾರಿನಲ್ಲಿ ಆಗಮಿಸುತ್ತಿದ್ದರು.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರದೀಪ್ ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಘಟನೆಯಲ್ಲಿ ಎರಡು ವಾಹನಗಳ ಚಾಲಕರು ಹಾಗೂ ಬಸ್ ನಲ್ಲಿದ್ದ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಮೆಗ್ಗಾನ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯಕ್ಕೆ ಮೆಗ್ಗಾನ್ ನಲ್ಲಿ ಇಬ್ಬರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಆರು ಜನ ಸರ್ಜಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

Advertisements

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ವಿವೇಕ ಟ್ರಾವೆಲ್ಸ್ ಖಾಸಗಿ ಬಸ್, ತದನಂತರ ಸಾಗರಕ್ಕೆ ತೆರಳಬೇಕಾಗಿತ್ತು. ಎಲ್ಎಲ್ಆರ್ ರಸ್ತೆಯಲ್ಲಿ ಬಸ್ ತೆರಳುತ್ತಿದ್ದ ವೇಳೆ, ಖಾಸಗಿ ಬಸ್‌ ರಾಯಲ್‌ ಆರ್ಕಿಡ್‌ ಹೊಟೇಲ್‌ ಎದುರು ಬಿ.ಹೆಚ್‌.ರಸ್ತೆಯಿಂದ ಎಲ್‌ಎಲ್‌ಆರ್‌ ರಸ್ತೆಯಲ್ಲಿ ತೆರಳುತ್ತಿತ್ತು.

ಈ ಸಂದರ್ಭ ಗೋಪಿ ಸರ್ಕಲ್‌ ಕಡೆಯಿಂದ ಸವರ್‌ಲೈನ್‌ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.ಅಪಘಾತದ ಬಳಿಕ ಬಸ್ಸು ಪಕ್ಕದ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರು ಕೂಡ ಜಖಂ ಆಗಿದೆ.

ಕಿರಿದಾದ ರಸ್ತೆಯಲ್ಲಿ ಮಿತಿಮೀರಿದ ವೇಗ, ಅಜಾಗರೂಕ ಚಾಲನೆಯಿಂದ ಅವಘಡ ಸಂಭವಿಸಿದೆ.ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಘಟನಾ ಸ್ಥಳಕ್ಕೆ ಎಸ್ಪಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಸಂಜೀವ್ ಪಾಟೀಲ್, ಟ್ರಾಫಿಕ್ ಸರ್ಕಲ್ ಇನ್ಸ್’ಪೆಕ್ಟರ್ ದೇವರಾಜ್, ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ಗಳಾದ ತಿರುಮಲೇಶ್, ಭಾರತಿ ಬಿ ಹೆಚ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X