ದಾವಣಗೆರೆ | ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಜತೆಗೆ ಮೊಟ್ಟೆ ನೀಡಲು ನಿರ್ಧಾರ: ಸಚಿವ ರಹೀಂ ಖಾನ್

Date:

Advertisements

2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಡವರಿಗಾಗಿ ಆರಂಭಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ​ ಬಡವರ ಹಸಿವು ನೀಗಿಸುವ ತಾಣವಾಗಿದೆ. ಇಲ್ಲಿ ತನಕ ಕ್ಯಾಂಟಿನ್​​ ಮೆನ್ಯೂನಲ್ಲಿ ಅನ್ನ ಸಾಂಬಾರ್​​, ಚಪಾತಿ, ತಿಂಡಿ ಕೇವಲ 10 ರೂಪಾಯಿಗೆ ಕೊಡಲಾಗುತ್ತಿತ್ತು. ಇದೀಗ ಸರ್ಕಾರ ಊಟದ ಮೆನ್ಯೂನಲ್ಲಿ ಮೊಟ್ಟೆ ಕೊಡಲು ನಿರ್ಧರಿಸಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್​ ಸುಳಿವು ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಪರಿಶೀಲನೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೂಲಿ ಕಾರ್ಮಿಕರು, ಬಡಜನರಿಗೆ ಪ್ರೋಟಿನ್​​​​ ನೀಡುವ ಉದ್ದೇಶದಿಂದ ನಮ್ಮ ಮೊಟ್ಟೆ ಕೊಡಬೇಕೆಂದು ನಿರ್ಧರಿಸಿದ್ದೇವೆ” ಎಂದರು.

“ಇಂದಿರಾ ಕ್ಯಾಂಟೀನ್ ಯೋಜನೆ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಅವರು 2013ರಲ್ಲಿ ಸಿಎಂ ಆಗಿದ್ದಾಗ 196 ಕ್ಯಾಂಟೀನ್‌ಗಳನ್ನು ತೆರೆದರು. ನಮ್ಮ‌ ಸರ್ಕಾರ ಇರುವ ತನಕ ಈ ಇಂದಿರಾ ಕ್ಯಾಂಟೀನ್​ಗಳು ಚೆನ್ನಾಗಿ ನಡೆದವು. ತದನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸಮಸ್ಯೆಗೆ ಸಿಲುಕಿದವು. ಪುನಃ ಸಿಎಂ ಆಗಿ ಸಿದ್ದರಾಮಯ್ಯ ಅವರು ನೇಮಕವಾದ ಬಳಿಕ, ಮುಚ್ಚಿದ್ದ ಕ್ಯಾಂಟೀನ್​ಗಳನ್ನು ತೆರೆಸಿದರು. ಇದೀಗ ಮತ್ತೆ 186 ನೂತನ ಇಂದಿರಾ ಕ್ಯಾಂಟೀನ್​ಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ 100ಕ್ಕೂ ಅಧಿಕ ಕ್ಯಾಂಟೀನ್‌ ಪ್ರಾರಂಭವಾಗಿವೆ. ಉಳಿದ ಕ್ಯಾಂಟೀನ್‌ಗಳು ಶೀಘ್ರದಲ್ಲೇ ಕಾರ್ಯಾರಂಭ ಆಗಲಿವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ” ಎಂದು ರಹೀಂ ಖಾನ್ ಹೇಳಿದ್ದಾರೆ. ‌

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಎಲ್ಲ ವಂಚಿತ ಶ್ರಮಿಕ ನಿವಾಸಿಗಳಿಗೂ ಹಕ್ಕುಪತ್ರ ವಿತರಿಸಲು ತೀರ್ಮಾನ

“ಕೇಂದ್ರ ಸರ್ಕಾರ ವಿವಾದಿತ ಬಿಲ್​(ಮಸೂದೆ)ಗಳನ್ನು ತರುವ ಬದಲು ಜನಸಾಮಾನ್ಯರಿಗೆ ಉಪಯೋಗವಾಗುವಂತಹ ಬಿಲ್​ ತರಲಿ.‌ ಅಲ್ಲದೆ ಸಿಗರೇಟ್​, ಕುಡಿತ, ಗುಟ್ಕಾ ಚಟದಿಂದ ಜನತೆ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿವಾಹಿತ ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಿಗರೇಟ್, ಕುಡಿತ, ಗುಟ್ಕಾ ವಿರುದ್ಧ ಬಿಲ್ ತಂದು ಜನರಿಗೆ ಆಸರೆ ಆಗಲಿ” ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

Download Eedina App Android / iOS

X