ಗುಬ್ಬಿ | ಪರಿಸರ ಕಾಳಜಿ ಪ್ರಸ್ತುತ ಮಕ್ಕಳಲ್ಲಿ ಮೂಡಬೇಕು : ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ಎಂ ಡಿ ಎಸ್.ರಘು

Date:

Advertisements

ಜಾಗತೀಕ ವಾತಾವರಣಕ್ಕೆ ಪರಿಸರ ಅಸಮತೋಲನವಾಗಿದೆ. ತಂತ್ರಜ್ಞಾನ ಬೆಳೆದಂತೆ ಪ್ರಕೃತಿ ಕೂಡಾ ಬದಲಾವಣೆಗೊಳ್ಳುತ್ತಿದೆ. ಮನುಷ್ಯ ಪ್ರಸ್ತುತ ಪರಿಸರದಲ್ಲಿ ಉಳಿಯಬೇಕಾದರೆ ಪರಿಸರ ಸಂರಕ್ಷಣೆ ಅತ್ಯಗತ್ಯ. ಇಂದಿನ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ ಪ್ರತಿ ಮಕ್ಕಳು ಎರೆಡೆರಡು ಸಸಿ ನೆಟ್ಟು ಪೋಷಿಸಬೇಕು ಎಂದು ಮೀಡಿಯಾ ಬ್ಯಾಕ್ ಆಫೀಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ರಘು ತಿಳಿಸಿದರು.

ಪಟ್ಟಣದ ಎಂ.ಜಿ.ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಮ್ಮ 47 ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆ ವಿಶ್ವ ಪರಿಸರ ದಿನಾಚರಣೆ ಜೊತೆಗೆ ವಿವಿಧ ಸಸಿಗಳನ್ನು ನೆಟ್ಟು ಮಾತನಾಡಿದ ಅವರು ಅರಣ್ಯ ಸಂಪತ್ತು ವಿನಾಶದಂಚಿಗೆ ಬಂದಿರುವ ಕಾರಣ ಹಸಿರು ಕ್ರಾಂತಿ ಎಲ್ಲೆಡೆ ಆಗಬೇಕಿದೆ. ಶೇಕಡಾ 33 ಅರಣ್ಯ ಸಂಪತ್ತು ಅತ್ಯವಶ್ಯವಿದ್ದು, ಇನ್ನೂ ಶೇಕಡಾ 19 ರಷ್ಟು ಮಾತ್ರ ಅರಣ್ಯ ಉಳಿಸಿದ್ದೇವೆ ಎಂದರು.

ಮುಖಂಡ ಜಿ.ಎನ್.ಬೆಟ್ಟಸ್ವಾಮಿ ಮಾತನಾಡಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬ ನಾಗರೀಕ ಗಿಡ ಬೆಳೆಸಿ ಪೋಷಿಸುವ ಹೊಣೆ ಹೊರಬೇಕು. ಹುಟ್ಟುಹಬ್ಬದ ಸವಿ ನೆನಪಿಗೆ ಸಸಿ ನೆಡುವ ಕೆಲಸ ಮಾಡಿದ ರಘು ಅವರ ಸಾಮಾಜಿಕ ಕೆಲಸ ಮೆಚ್ಚುವಂತದ್ದು. ಪರಿಸರ ಬಗ್ಗೆ ಮಕ್ಕಳಿಗೆ ವರ್ಷಪೂರ್ತಿ ವಿವರಿಸಿ ಜಾಗೃತಿ ಮೂಡಿಸಬೇಕಿದೆ ಎಂದರು.

Advertisements

ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್ ಮಾತನಾಡಿ ಪರಿಸರ ಎಂದರೆ ಹಸಿರು ಉಳಿಸುವ ನಮ್ಮ ಸುತ್ತಲಿನ ಮಾಲಿನ್ಯ ಕೂಡಾ ಸ್ವಚ್ಚವಾಗಿರಬೇಕು. ಮನೆಯ ವಾತಾವರಣ ಸುಂದರವಾಗಿ ಇಟ್ಟುಕೊಳ್ಳುವ ಜನರು ತಮ್ಮ ಕಚೇರಿ, ದೇವಸ್ಥಾನ, ಶಾಲೆ, ಕಾಲೇಜು, ಪಾರ್ಕ್, ರಸ್ತೆ, ಚರಂಡಿ ಕೂಡಾ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇದು ನಾಗರೀಕರ ಜವಾಬ್ದಾರಿ ಆಗಿದೆ ಎಂದರು.

ಈ ಸಂದರ್ಭದಲ್ಲಿ ಎಸ್.ರಘು ಅವರ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಮಕ್ಕಳಿಗೆ ಹಂಚಲಾಯಿತು. ಮುಖಂಡರಾದ ಸುರುಗೇನಹಳ್ಳಿ ರಂಗನಾಥ್, ಮಹಾಲಿಂಗಯ್ಯ, ಸತೀಶ್, ರಘು, ಚಿಕ್ಕರಾಜು, ಜಿ.ಎಸ್.ಮಂಜುನಾಥ್, ಮನೋಹರ್, ಸ್ಟ್ಯಾಂಪ್ ವೆಂಡರ್ ನರಸಿಂಹಮೂರ್ತಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X