ಗುಬ್ಬಿ | ಕೇಂದ್ರದ ಉಜ್ವಲ್ ಯೋಜನೆಯಿಂದ ಅರಣ್ಯ ಪ್ರದೇಶ ವಿಸ್ತರಣೆ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಟಿ.ಭೈರಪ್ಪ

Date:

Advertisements

ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳು ಪರಿಸರ ಸಂರಕ್ಷಣೆ ಪೂರಕವಾಗಿ ಸಿದ್ಧವಾಗಿದೆ. ಉಜ್ವಲ್ ಯೋಜನೆ ಮೂಲಕ ಪ್ರತಿ ಮನೆಗೆ ಅಡುಗೆ ಅನಿಲ ಸಿಲಿಂಡರ್ ನೀಡಿದ್ದು ಮರಗಿಡಗಳ ಕಡಿಯುವ ಸಂಖ್ಯೆ ಕ್ಷೀಣಿಸಿದೆ. ಈ ಹಿನ್ನಲೆ ದೇಶದ ಅರಣ್ಯ ಸಂಪತ್ತು ಶೇಕಡಾ 2 ರಷ್ಟು ವೃದ್ಧಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್.ಟಿ.ಭೈರಪ್ಪ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎನ್ಎಸ್ಎಸ್ ಘಟಕದಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ಮಾತನಾಡಿದ ಅವರು ಪ್ರಧಾನಿ ಮೋದಿ ಅವರ ಆಲೋಚನೆಗಳು ಪರಿಸರ ಕಾಳಜಿಗೆ ಅವಲಂಬಿಸಿದೆ. ಮನೆಗೊಂದು ಶೌಚಾಲಯ, ಮನೆ ಮನೆಗೆ ನೀರು, ಕೆರೆ ಅಭಿವೃದ್ಧಿ ಹೀಗೆ ಅನೇಕ ಕಾರ್ಯಕ್ರಮಗಳ ಜೊತೆ ಈ ವರ್ಷ ಪ್ಲಾಸ್ಟಿಕ್ ಮುಕ್ತ ದೇಶ ನಿರ್ಮಿಸಲು ಪಣ ತೊಟ್ಟಿದ್ದಾರೆ ಎಂದರು.

ಪ್ರಾಂಶುಪಾಲ ಪ್ರಸನ್ನ ಮಾತನಾಡಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಸಿ ನೆಡುವ ಜೊತೆ ಸಸಿ ಪೋಷಿಸುವ ಕೆಲಸ ನಿತ್ಯ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಕಾಲೇಜು ಕಟ್ಟಡ ಸುತ್ತ ಪರಿಸರ ಕಾಪಾಡುವ ಜೊತೆಗೆ ವಿದ್ಯಾರ್ಥಿಗಳು ತಮ್ಮ ಊರಿನ ಪರಿಸರ ಕಾಳಜಿ ಕೂಡಾ ಹೊಂದಿರಬೇಕು ಎಂದರು.

Advertisements

ಎನ್ಎಸ್ಎಸ್ ಅಧಿಕಾರಿ ಸುಮುಖ್, ಪ್ರೊ.ತಿಮ್ಮಣ್ಣ, ಮುಖಂಡ ಜಿ.ಎಂ.ಶಿವಾನಂದ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X