ಗದಗ | ಆರ್.ಸಿ.ಬಿ ಸಂಭ್ರಮಾಚರಣೆ, ಕಾಲ್ತುಳಿತ, 11 ಜನರ ಸಾವು ಸರ್ಕಾರದ ನಿರ್ಲಕ್ಷ್ಯ ಎಸ್ ಎಫ್ ಐ ಖಂಡನೆ

Date:

Advertisements

“ಆರ್.ಸಿ.ಬಿ. ತಂಡದ ಗೆಲುವಿನ ಸಂಭ್ರಮಾಚರಣೆಗೆ ಸಾವಿರಾರು ಜನರು ಸೇರುವುದನ್ನು ರಾಜ್ಯ ಸರ್ಕಾರ ಅಂದಾಜಿಸಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಇದರ ವೈಫಲ್ಯದಿಂದ  ಕಾಲ್ತುಳಿತ ಸಂಭವಿಸಿ 11 ಜನರ ಸಾವು ಮತ್ತು ಹಲವಾರು ಮಂದಿ‌ ಗಂಭೀರವಾದ ಸ್ಥಿತಿಗೆ ದೂಡುವಂತೆ ಮಾಡಿದೆ” ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಅಸಮಾಧಾನ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಜೂನ್ 3ರ ರಾತ್ರಿ ನಡೆದ ಐಪಿಎಲ್ ಪೈನಲ್ ಪಂದ್ಯದಲ್ಲಿ ಆರ್.ಸಿ.ಬಿ. ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ  ಗೆಲುವು ಪಡೆದು  ಟ್ರೋಫಿ ತನ್ನದಾಗಿಸಿಕೊಂಡಿತ್ತು. ಈ ಗೆಲುವಿನ ಸಂಭ್ರಮಾಚರಣೆಯನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ. ಫ್ರಾಂಚೈಸಿ ಮತ್ತು ವಿಧಾನ ಸೌಧ ಮುಂಭಾಗ ರಾಜ್ಯ ಸರ್ಕಾರ  ಆಯೋಜಿಸಿದ್ದವು. ಈ ಸಂಭ್ರಮಾಚರಣೆಗೆ ಕನಿಷ್ಡ ವ್ಯವಸ್ಥೆಗಳನ್ನು ಮಾಡಿಕೊಳ್ಳದೆ, ಎರಡು ಕಡೆ ಕಾರ್ಯಕ್ರಮಕ್ಕೆ ಅವಕಾಶ ‌ನೀಡಿದ್ದು ಸರಿಯಾದ ಕ್ರಮವಲ್ಲ” ಎಂದು ಹೇಳಿದರು.

“ಎರಡು ಕಡೆ ಕಾರ್ಯಕ್ರಮವನ್ನು ಆಯೋಜಿಸಿದ ಮೇಲೆ ಅದಕ್ಕೆ ತಕ್ಕಂತಹ ಸಿದ್ಧತೆಯನ್ನು ರಾಜ್ಯ  ಸರ್ಕಾರ ಮಾಡಬೇಕಿತ್ತು. ಆರ್.ಸಿ.ಬಿ. ಫ್ರಾಂಚೈಸಿ ಮಾಲೀಕರು ಸಹ ಸೂಕ್ತ ಭದ್ರತೆ ಪಡೆಯಬೇಕಿತ್ತು. ಇಡೀ  ಪೋಲೀಸ್ ಇಲಾಖೆಯ ಭದ್ರತೆ ವಿಧಾನ ಸೌಧ ಕಾರ್ಯಕ್ರಮಕ್ಕೆ ನೀಡಿ,  ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮದ ಭದ್ರತಾ ಕೆಲಸಗಳಿಗೆ ನಿರ್ಲಕ್ಷ್ಯತೆ ವಹಿಸಿದಂತೆ ಕಾಣುತ್ತದೆ.‌ ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನ್ನು ಒಮ್ಮೆಲೆ ತೆರೆದಿದ್ದು ನೂಕುನುಗ್ಗಲು ಹೆಚ್ಚಾಗಿ  ಈ ದುರಂತಕ್ಕೆ ಎಡೆಮಾಡಿಕೊಟ್ಟಂತಿದೆ.  ಇದು ರಾಜ್ಯ ಗೃಹ ಇಲಾಖೆಯ ವೈಫಲ್ಯವಾಗಿದೆ” ಎಂದು ಕಿಡಿಕಾರಿದರು.

Advertisements

“ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್  ಗೆದ್ದಾಗ, ಕರ್ನಾಟಕ ತಂಡ ರಣಜಿ ಟ್ರೋಫಿ ಗೆದ್ದಾಗ ನೀಡದಿರುವ ಮಹತ್ವ ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ, ಅನುದಾನ ನೀಡಿದ ರಾಜ್ಯ ಸರ್ಕಾರ ಆರ್.ಸಿ.ಬಿ. ಫ್ರಾಂಚೈಸಿ ತಂಡ ಗೆಲುವಿಗೆ ಮಹತ್ವ ನೀಡಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು ದುರದೃಷ್ಟಕರವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ; 5 ವರ್ಷದ ಬಾಲಕ ಸೇರಿ ಇಬ್ಬರ ಸಾವು

ಘಟನೆಯಲ್ಲಿನ ಎಲ್ಲಾ ಗಾಯಾಳುಗಳ ಚಿಕಿತ್ಸೆ ವೆಚ್ಚ, ಆರೈಕೆ ಅವಧಿಯ ವೆಚ್ಚವನ್ನು ಸರಕಾರವೇ ನೋಡಿಕೊಳ್ಳಬೇಕು. ಮೃತ ವ್ಯಕ್ತಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ರಾಜ್ಯ ಸರ್ಕಾರ ಹಾಗೂ ಆರ್.ಸಿ.ಬಿ. ಫ್ರಾಂಚೈಸಿ ಮಾಲಿಕರು  ಘೋಷಿಸಬೇಕು” ಎಂದು ಚಂದ್ರು ರಾಠೋಡ ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X