ಕ್ರಿಕೆಟ್‌ಗೆ ಪಿಯೂಷ್ ಚಾವ್ಲಾ ನಿವೃತ್ತಿ; 2 ಬಾರಿ ಭಾರತ ವಿಶ್ವಕಪ್‌ ಗೆದ್ದಾಗ ತಂಡದ ಪ್ರಮುಖ ಬೌಲರ್‌

Date:

Advertisements

ಭಾರತ ಎರಡು ಬಾರಿ ವಿಶ್ವಕಪ್‌ ಗೆದ್ದಿದ್ದ ಸಂದರ್ಭದಲ್ಲಿ ತಂಡದ ಪ್ರಮುಖ ಬೌಲರ್‌ ಆಗಿದ್ದ ಲೆಗ್‌ ಸ್ಪಿನ್ನರ್‌ ಪಿಯೂಶ್‌ ಚಾವ್ಲಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿರುವ ಅವರು, “ಎರಡು ದಶಕಗಳಿಗೂ ಹೆಚ್ಚು ಕಾಲ ಮೈದಾನದಲ್ಲಿದ್ದ ನಂತರ, ಸೊಗಸಾದ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ” ಎಂದು 36 ವರ್ಷದ ಪಿಯೂಶ್‌ ಚಾವ್ಲಾ ಬರೆದುಕೊಂಡಿದ್ದಾರೆ.

ಪಿಯೂಶ್‌ ಚಾವ್ಲಾ ಅವರು ಭಾರತ ತಂಡ 2007ರ ಟಿ20 ಹಾಗೂ 2011ರ ಏಕದಿನ ವಿಶ್ವಕಪ್‌ ಗೆದ್ದ ತಂಡದ ಸದಸ್ಯರಾಗಿದ್ದರು. ಮೂರು ಟೆಸ್ಟ್‌, 25 ಏಕದಿನ ಹಾಗೂ 7 ಟಿ20 ಆಡಿರುವ ಪಿಯೂಷ್‌, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 446 ವಿಕೆಟ್‌ ಹಾಗೂ 5486 ರನ್‌ಗಳನ್ನು ಪೇರಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಚಿನ್ನಸ್ವಾಮಿ ಸ್ಟೇಡಿಯಂ ದುರಂತ: ಆರ್‌ಸಿಬಿ, ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧ ಎಫ್‌ಐಆರ್‌ ದಾಖಲು

“ಭಾರತವು ಅತ್ಯುನ್ನತ ಟೂರ್ನಿಯಾದ 2007ರ ಟಿ20 ಹಾಗೂ 2011ರ ಏಕದಿನ ವಿಶ್ವಕಪ್‌ ಜಯಿಸಿದ ತಂಡದ ಸದಸ್ಯನಾಗಿದ್ದು, ಈ ಅದ್ಭುತ ಪ್ರಯಾಣದ ಪ್ರತಿಯೊಂದು ಕ್ಷಣವೂ ಅಭೂತಪೂರ್ವವಾದುದು. ಈ ನೆನಪುಗಳು ನನ್ನ ಹೃದಯದಲ್ಲಿ ಸದಾ ಕಾಲ ಉಳಿದುಕೊಳ್ಳುತ್ತದೆ” ಎಂದು ಬರೆದುಕೊಂಡಿದ್ದಾರೆ.

“ಐಪಿಎಲ್‌ ಟೂರ್ನಿಯಲ್ಲಿ ನನಗೆ ಅವಕಾಶ ಕೊಟ್ಟ ಪ್ರಾಂಚೈಸಿಗಳಾದ ಪಂಜಾಬ್‌ ಕಿಂಗ್ಸ್, ಕೋಲ್ಕತ್ತಾ ನೈಟ್‌ ರೈಡರ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಐಪಿಎಲ್‌ ಟೂರ್ನಿ ನನ್ನ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ನಿಜವಾದ ವಿಶೇಷ ಅಧ್ಯಾಯವಾಗಿದೆ. ಅದರಲ್ಲಿ ಆಡುವ ಪ್ರತಿ ಕ್ಷಣವನ್ನು ನಾನು ಪ್ರೀತಿಸುತ್ತೇನೆ. ನನ್ನನ್ನು ಉತ್ತಮ ಕ್ರಿಕೆಟರ್‌ ಆಗಿ ರೂಪಿಸಿದ ನನ್ನ ಕೋಚ್‌ಗಳಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X