ಉರ್ದು ಭಾಷೆಯಲ್ಲಿ ಶಾಲೆಯ ಹೆಸರು ಬರೆಸಿದ್ದಕ್ಕೆ ಮುಖ್ಯ ಶಿಕ್ಷಕಿ ಅಮಾನತು

Date:

Advertisements

ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

ಬಿಜ್ನೋರ್‌ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರಪ್ತಾ ಖಾನ್ ಅವರನ್ನು ಅಮಾನತು ಮಾಡಿರುವುದಾಗಿ ಬಿಜ್ನೋರ್ ಜಿಲ್ಲಾ ಪ್ರಾಥಮಿಕ ಶಿಕ್ಷಣ ಅಧಿಕಾರಿ(ಬಿಎಸ್‌ಎ) ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.

ಮುಖ್ಯ ಶಿಕ್ಷಕಿ ರಪ್ತಾ ಖಾನ್ ಅವರು ಶಾಲೆಯ ಮುಖ್ಯ ದ್ವಾರ ಮತ್ತು ಒಳಗಿನ ಗೋಡೆ ಮೇಲೆ ಶಾಲೆಯ ಹೆಸರನ್ನು ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಬರೆಸಿದ್ದರು. ಹಿಂದಿಯ ಜೊತೆಗೆ ಉರ್ದು ಭಾಷೆಯಲ್ಲಿಯೂ ನಾಮಫಲಕವನ್ನು ಬರೆಸಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ.

Advertisements

ಹಿಂದಿ ಮತ್ತು ಉರ್ದು ಭಾಷೆಯಲ್ಲಿ ನಾಮಫಲಕ ಬರೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಭಾಷೆಗೆ ಸಂಬಂಧಿಸಿದ ನಿಯಮಗಳನ್ನು ಮುಖ್ಯ ಶಿಕ್ಷಕಿ ಉಲ್ಲಂಘಿಸಿದ್ದಾರೆ. ಹೀಗಾಗಿ, ಅವರನ್ನು ಅಮಾನತು ಮಾಡಲಾಗಿದೆ ಎಂದು ಬಿಎಸ್‌ಎ ಯೋಗೇಂದ್ರ ಕುಮಾರ್ ಹೇಳಿದ್ದಾರೆ.

ಆದಾಗ್ಯೂ, ವೈರಲ್ ಆಗಿರುವ ವಿಡಿಯೋ ಹಳೆಯದ್ದಾಗಿದ್ದು, ಈ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ ಶಾಲೆಗೆ ಬಣ್ಣ ಬಳಿಯಲಾಗಿದೆ. ಈ ವೇಳೆ, ಉರ್ದು ಭಾಷೆಯಲ್ಲಿ ಬರೆಯಲಾಗಿದ್ದ ಹೆಸರನ್ನು ಅಳಿಸಲಾಗಿದೆ ಎಂದು ಅಮಾನತಾಗಿರುವ ಮುಖ್ಯ ಶಿಕ್ಷಕಿ ರಪ್ತಾ ಖಾನ್ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮರಾಠಿ ನಾಡಿನಲ್ಲಿ ಹಿಂದಿ ಕಡ್ಡಾಯಕ್ಕೆ ತಡೆ: ನಡೆದದ್ದೇನು?

ಪ್ರಕರಣದ ಕುರಿತು ತನಿಖೆ ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ತನಿಖಾ ವರದಿ ಬಂದ ಬಳಿಕ, ಕಾನೂನು ಕ್ರಮ ಜರುಗಿಸುವುದಾಗಿ ಯೋಗೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಅಂದಹಾಗೆ, ದಕ್ಷಿಣ ಭಾರತದ ರಾಜ್ಯಗಳು ಭಾಷಾ ಸ್ವಾಭಿಮಾನಕ್ಕಾಗಿ ಮತ್ತು ಹಿಂದಿ ಹೇರಿಕೆಯ ವಿರುದ್ಧ ನಿರಂತರವಾಗಿ ಹೋರಾಟ ನಡಸುತ್ತಿವೆ. ಆದರೆ, ಎಲ್ಲ ಭಾಷೆಗಳನ್ನು ಒಳಗೊಳ್ಳಬೇಕು, ಕಲಿಯಬೇಕು ಎಂದು ಉತ್ತರ ರಾಜ್ಯಗಳು, ಅದರಲ್ಲೂ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಹೇಳುತ್ತಿವೆ. ದಕ್ಷಿಣ ರಾಜ್ಯಗಳ ಮೇಲೆ ಹಿಂದಿಯನ್ನು ಹೇರಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಹವಣಿಸುತ್ತಿದೆ. ಇಂತಹ ಸಂದರ್ಭದಲ್ಲಿ, ಹಿಂದಿ ಭಾಷೆಯಲ್ಲದೆ, ಮತ್ತೊಂದು ಭಾಷೆಯಲ್ಲಿ ನಾಮಫಲಕ ಬರೆಸಿದ್ದಕ್ಕಾಗಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವುದು ದಕ್ಷಿಣ ರಾಜ್ಯಗಳಲ್ಲಿ ಭಾಷಾ ಹೇರಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X