ಕಲಬುರಗಿ | ವಸತಿ ನಿಲಯಗಳ ಉನ್ನತೀಕರಣ ಆದೇಶ ಹಿಂಪಡೆಯಲು ದಸಂಸ ಒತ್ತಾಯ

Date:

Advertisements

ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಏಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯಗಳನ್ನು ಉನ್ನತೀಕರಿಸುವ ಇಲಾಖೆಯ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಕುರಿತು ದಸಂಸ ಪದಾಧಿಕಾರಿಗಳು ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಜೇವರ್ಗಿ ತಾಲ್ಲೂಕು ಆಡಳಿತಕ್ಕೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ, ಪಾಲಕರ ಹಾಗೂ ಸ್ಥಳೀಯರ ಗಮನಕ್ಕೆ ತರದೆ ವಸತಿ ನಿಲಯಗಳ ಉನ್ನತೀಕರಿಸುವವುದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಕೂಡಲೇ ಆದೇಶ ಹಿಂಪಡೆದು ಈಗಿರುವ ಸ್ಥಳದಲ್ಲೇ ವಸತಿ ನಿಲಯಗಳು ಮುಂದುವರೆಸುವಂತೆ ಆಗ್ರಹಿಸಿದರು.

Advertisements

ಸುಮಾರು ವರ್ಷಗಳಿಂದ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಆರ್ಥಿಕವಾಗಿ ಕಡುಬಡವರಿದ್ದು, ತಮ್ಮ ಶಿಕ್ಷಣಕ್ಕಾಗಿ ಸಮೀಪದ ವಸತಿ ನಿಲಯಗಳಲ್ಲಿ ಪ್ರವೇಶ ಬಯಸುತ್ತಿದ್ದು, ಸದರಿ ವಸತಿ ನಿಲಯಗಳಲ್ಲಿ 5ರಿಂದ 10ನೇ ತರಗತಿ ವಿದ್ಯಾರ್ಥಿಗಳು, ಏಕಾಏಕಿ ವಸತಿ ನಿಲಯಗಳನ್ನು ಉನ್ನತೀಕರಿಸುವ ಸರಕಾರದ ನಿಲುವು ಒಳಿತಾಗಿದ್ದರು ಏಕಾಏಕಿ ಶಾಲೆಗಳಲ್ಲಿ ಪ್ರವೇಶ ಪಡೆದಿರುವಂತ ವಿದ್ಯಾರ್ಥಿಗಳು ವಸತಿ ನಿಲಯದಿಂದ ವಂಚಿತರಾಗಿ ಶಿಕ್ಷಣದಿಂದ ದೂರ ಉಳಿಯುವಂತಾಗುತ್ತದೆʼ ಎಂದು ದೂರಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬಿಸಿಎಂ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು ಯಥಾವತ್ತಾಗಿ ಈಗಿರುವ ಸ್ಥಳದಲ್ಲಿಯೇ ವಸತಿ ನಿಲಯಗಳನ್ನು ಮುಂದುವರೆಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳು, ಪೋಷಕರು ಕಚೇರಿ ಎದುರು ಧರಣಿ ನಡೆಸುತ್ತೇವೆʼ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಜೂನ್‌ 9ರಂದು ಪ್ರೊ.ಬಿ.ಕೃಷ್ಣಪ್ಪ ಜನ್ಮದಿನ : ನಾಗರಿಕ ಹಕ್ಕು ರಕ್ಷಣಾ ದಿನ ಆಚರಣೆ

ಮುಖಂಡರಾದ ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ಶ್ರೀಹರಿ ಕರಕಿಹಳ್ಳಿ, ಸಿದ್ರಾಮ ಕಟ್ಟಿ, ಸಿದ್ದು ಕೆರೂರ, ಮಾಪಣ್ಣ ಕಟ್ಟಿ, ರವಿ ಕುರಳಗೇರಾ, ದವಲಪ್ಪ ಮದನ, ಮಹೇಶ ಕೋಕಿಲೆ, ಪರಮಾನಂದ ಯಲಗೋಡ, ಗುಂಡಪ್ಪ ಜಡಗಿ, ಶಿವಕುಮಾರ ಹೆಗಡೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X