ಗದಗ | ಶಾಂತಿಯುತ, ಮುಕ್ತ ಮತದಾನಕ್ಕಾಗಿ ಶಶಸ್ತ್ರ ಠೇವಣಿ: ಜಿಲ್ಲಾಧಿಕಾರಿ

Date:

Advertisements

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಉಪ-ಚುನಾವಣೆಗೆ ಜುಲೈ 23 ರಂದು ಮತದಾನ ಜರುಗಲಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್‌ ತಿಳಿಸಿದ್ದಾರೆ.

“ಚುನಾವಣೆ ಘೋಷಣೆ ದಿನಾಂಕದಿಂದ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳುವವರೆಗೆ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮುಂಡರಗಿ ತಾಲೂಕು 17- ಮುರಡಿ ವ, ಮುರಡಿ ತಾಂಡಾ(ಮಾರುತಿ ನಗರ), ಚಿಕ್ಕವಡ್ಡಟ್ಟಿ ಮತ್ತು ಗುಡ್ಡದ ಬೂದಿಹಾಳ ಹಾಗೂ ಡೋಣಿ ಗ್ರಾಮ ಪಂಚಾಯತಿಯ ಡೋಣಿ-1 ವ್ಯಾಪ್ತಿಯಲ್ಲಿ ಆಯುಧ ಪರವಾನಗಿ ಹೊಂದಿರುವವರು ತಮ್ಮ ಆಯುಧಗಳನ್ನು ಜೊತೆಯಲ್ಲಿ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ” ಎಂದು ಸೂಚಿಸಿದ್ದಾರೆ.

“ಆಯುಧ ಹೋದಿರುವವರು ತಮ್ಮ ಆಯುಧಗಳನ್ನು ಜುಲೈ 19 ರೊಳಗಾಗಿ ತಮ್ಮ ಸಮೀಪದ ಆರಕ್ಷಕ ಠಾಣೆಯಲ್ಲಿ ಠೇವಣಿ ಮಾಡಿ ರಶೀದಿ ಪಡೆಯಬೇಕು. ಜುಲೈ 23ರಂದು ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಉಪ ಚುನಾವಣೆ ಪ್ರಕಿಯೆ ಮುಗಿದ ಕೂಡಲೇ ಠೇವಣಿ ಮಾಡಲಾದ ಆಯುಧಗಳನ್ನು ಅವುಗಳ ವಾರಸುದಾರರಿಗೆ ಯಾವುದೇ ನಿರ್ದೇಶನಗಳಿಗೆ ಕಾಯದೇ ಪರತ ಮಾಡಬೇಕು. ಈ ಆದೇಶವು ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಿಗೆ ಹಾಗೂ ವಿವಿಧ ಹಣಕಾಸು ಸಂಸ್ಥೆಗಳ ಭದ್ರತಾ ಪಡೆಯ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಒತ್ತಾಯ

“ಜಿಲ್ಲಾ ಆಯುಧ ಠೇವಣಿ ಕುರಿತು ಜಿಲ್ಲಾ ಸ್ಕ್ರೀನಿಂಗ್ ಕಮೀಟಿ ರಚಿಸಿದ್ದು, ಸದರಿ ಆದೇಶದನ್ವಯ ಕ್ರಮ ವಹಿಸಬೇಕು. ಈ ಆದೇಶವು ಗದಗ ಜಿಲ್ಲಾ ಮುಂಡರಗಿ ತಾಲೂಕ 17- ಮುರಡಿ ವ, ಮುರಡಿ ತಾಂಡಾ (ಮಾರುತಿ ನಗರ), ಚಿಕ್ಕವಡ್ಟಟ್ಟಿ ಮತ್ತು ಗುಡ್ಡದಬೂದಿಹಾಳ ಹಾಗೂ ಡೋಣಿ ಗ್ರಾಮ ಪಂಚಾಯತಿಯ ಡೋಣಿ-1 ಗ್ರಾಮ ವ್ಯಾಪ್ತಿಗೆ ಮಾತ್ರ ಅನ್ವಯಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X