ಚಿಕ್ಕಮಗಳೂರು l ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಉನ್ನತೀಕರಿಸಲಾಗುತ್ತಿದೆ; ಕೋಟ ಶ್ರೀನಿವಾಸ್ ಪೂಜಾರಿ

Date:

Advertisements

ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಗಳನ್ನು ಮತ್ತಷ್ಟು ಉನ್ನತೀಕರಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಚಿಕ್ಕಮಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತಾಡಿದರು.

ಬಿಎಸ್‌ಎನ್‌ಎಲ್ ಬಳಕೆದಾರರ ಕುಂದು ಕೊರತೆಗಳನ್ನು ಆಲಿಸಲು ಎಲ್ಲಾ ತಾಲೂಕಿನಲ್ಲೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿರುವ 217 ಮೊಬೈಲ್ ಟವರ್ ಗಳ ಪೈಕಿ 165 ಮೊಬೈಲ್ ಟವರ್ ಗಳು 4ಜಿ ನೆಟ್ವರ್ಕ್ ಗೆ ಉನ್ನತಿಕರಿಸಲಾಗಿದೆ. 6 ಮೊಬೈಲ್ ಟವರ್ ಗಳ 4ಜಿ ಉನ್ನತಿಕರಣ ಕಾಮಗಾರಿ ನಡೆಸಲಾಗುತ್ತಿದೆ.

ಹಾಗೆಯೇ, ಚಿಕ್ಕಮಗಳೂರು ಜಿಲ್ಲೆಯಲ್ಲಿ 2.56 ಲಕ್ಷ ಸಿಮ್ ಕಾರ್ಡ್ ಗಳು ಬಳಕೆಯಲ್ಲಿವೆ. ಜಿಲ್ಲೆಯಲ್ಲಿರುವ ಮತ್ತಷ್ಟು ಟವ‌ರ್ ಗಳನ್ನು ಉನ್ನತೀಕರಿಸಿ ಅದರ ಬ್ಯಾಟರಿಗಳು, ವಿದ್ಯುತ್ ಸಂಪರ್ಕಗಳನ್ನು ದುರಸ್ತಿಗೊಳಿಸಿದರೆ ಮತ್ತಷ್ಟು ಬಳಕೆದಾರರು ಜಿಲ್ಲೆಯಲ್ಲಿ ಹೆಚ್ಚಾಗುತ್ತಾರೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಎರಡು ಗುಂಪಿನ ಘರ್ಷಣೆ: ಪ್ರಕರಣ ದಾಖಲು

ಬಾಕಿ ಇರುವ 46 ಟವರ್ ಗಳಿಗೆ 4ಜಿ ಉಪಕರಣದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಜೊತೆಗೆ 78 ಟವರ್ ಗಳಿಗೆ ಮೊಬೈಲ್ ಬ್ಯಾಟರಿಗಳು ಮಂಜೂರಾಗಿದ್ದು ಇವುಗಳಲ್ಲಿ 51 ಬ್ಯಾಟರಿಗಳನ್ನು ಅಳವಡಿಕೆ ಮಾಡಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 217 ಮೊಬೈಲ್ ಟವರ್ ಗಳನ್ನು ಯಾವುದೇ ಸಮಸ್ಯೆ ಇಲ್ಲದೇ ಕಾರ್ಯಾಚರಿಸುವಂತೆ ಮಾಡಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X