ಬೆಳಗಾವಿ | ಸತ್ತ ಹೋರಿಗೆ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಿದ ಮುಸ್ಲಿಮರು

Date:

Advertisements

ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದ ಹೋರಿಯ ಅಂತ್ಯಕ್ರಿಯೆಯನ್ನು ಮುಸ್ಲಿಮರು ಹಿಂದು ಸಂಪ್ರದಾಯದಂತೆ ನೆರವೇರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.

ಚಿಕ್ಕೋಡಿಯ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರು ಸಾಕಿದ್ದ ಎತ್ತು ಅನಾರೋಗ್ಯದಿಂದ ಶುಕ್ರವಾರ ಮೃತಪಟ್ಟಿತ್ತು. ಆ ಎತ್ತಿನ ಅಂತ್ಯಕ್ರಿಯೆನ್ನು ತಾಜುದ್ದೀನ್ ಮತ್ತು ನೆರೆಹೊರೆಯ ಮುಸ್ಲಿಮರು ಹಿಂದು ವಿಧಿ-ವಿಧಾನಗಳನ್ನು ಅನುಸರಿಸಿ ನೆರವೇರಿಸಿದ್ದಾರೆ.

ಬರೋಬ್ಬರಿ 22 ವರ್ಷಗಳ ಹಿಂದೆ ತಾಜುದ್ದೀನ್‌ ಅವರು ಎರಡು ಹೋರಿ ಕರುಗಳನ್ನು ಖರೀದಿಸಿದ್ದರು. ಅವುಗಳಿಗೆ ಉಳುಮೆಯನ್ನು ಕಲಿಸಿ, ತಮ್ಮ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅದರಲ್ಲಿ, ಒಂದು ಎತ್ತು 2022ರಲ್ಲಿ ಮೃತಪಟ್ಟಿತ್ತು. ಶುಕ್ರವಾರ, ಮತ್ತೊಂದು ಎತ್ತು ಕೂಡ ಸಾವನ್ನಪ್ಪಿದೆ. ಈ ಎರಡೂ ಎತ್ತುಗಳ ಅಂತ್ಯಕ್ರಿಯೆಯನ್ನು ತಾಜುದ್ದೀನ್ ಅವರು ಹಿಂದು ಸಂಪ್ರಪಾಯದಂತೆಯೇ ಮಾಡಿದ್ದಾರೆ.

Advertisements

ತಾವು ಪ್ರೀತಿಯಿಂದ ಸಾಕಿದ್ದ ಎತ್ತುಗಳ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರೈತ ತಾಜುದ್ದೀನ್, “ಮುಂದಿನ ಶ್ರಾವಣ ಮಾಸದಲ್ಲಿ ಮೃತಪಟ್ಟ ಎತ್ತುಗಳಿಗೆ ಪುಟ್ಟ ದೇವಾಲಯ ಕಟ್ಟಿಸುತ್ತೇವೆ. ಪೂಜೆ ಮಾಡುತ್ತೇವೆ. ಅವುಗಳ ನಮ್ಮ ಕುಟುಂಬಕ್ಕೆ ದೇವರಿದ್ದಂತೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X