ಹಾಸನ | ಭ್ರಷ್ಟಾಚಾರದ ಅಡ್ಡೆಯಾಗಿದೆ ತಾಲೂಕು ಕಚೇರಿ; ಸ್ಥಳೀಯರ ಆರೋಪ

Date:

Advertisements

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಲಂಚ ಕೊಡಲಿಲ್ಲವೆಂದರೆ, ಒಂದೆರಡು ದಿನ ಆಗುವ ಕೆಲಸಗಳಿಗೆ ತಿಂಗಳಾದ್ಯಂತ ಕಚೇರಿಗೆ ಅಲೆಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ.

ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆಗಳಿಲ್ಲ. ಮೂಲ ಸೌಕರ್ಯಗಳಿಲ್ಲ. ಕಚೇರಿಗೆ ಬರುವ ಮಂದಿಗೆ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ಹಳ್ಳಿಗಳಿಂದ ರೈತರು, ಕೂಲಿ ಕಾರ್ಮಿಕರು ತಮ್ಮ ಕೆಲಸಗಳನ್ನು ಬಿಟ್ಟು ಬಂದು, ದಿನವಿಡೀ ಕಚೇರಿಯಲ್ಲಿ ಕಾದು ಕುಳಿತರೂ, ಕೆಲಸಗಳಾಗುವುದಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಚೇರಿಯಲ್ಲಿ ವಿಶೇಷ ಚೇತನರು ಬಂದರೂ ಅವರಿಗೆ ಆಧ್ಯತೆ ನೀಡದೆ, ಸರತಿ ಸಾಲಿನಲ್ಲಿ ನಿಲ್ಲಿಸುತ್ತಾರೆ. ಮೆಟ್ಟಿಲುಗಳನ್ನು ಏರಲು ಆಗದೇ ಇರುವವರಿಗೆ ಪರ್ಯಾಯ ವ್ಯವಸ್ಥೆ (ಲಿಫ್ಟ್‌) ಇಲ್ಲ. ಸಮಯ ಆಗದಿದ್ದರೂ ರೆಕಾರ್ಡ್ ರೂಮ್ ಬಾಗಿಲನ್ನು ಮುಚ್ಚುತ್ತಾರೆ” ಎಂದು ತಾಲೂಕಿನ ನಿವಾಸಿ ಪ್ರಭಾಕರ್ ಆರೋಪಿಸಿದ್ದಾರೆ.

Advertisements

“ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವುದಿಲ್ಲ. ಬಡ ಜನರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ” ಎಂದು ಅವರು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X