ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ವಿಡಿಯೋ ಬಿಡುಗಡೆ; ಪಂಜಾಬ್‌ ಪೊಲೀಸರ ಮೇಲೆ ಆರೋಪ

Date:

Advertisements
  • ಮಾರ್ಚ್‌ 18ರಿಂದ ತಲೆ ಮರೆಸಿಕೊಂಡಿರುವ ಖಲಿಸ್ತಾನಿ ನಾಯಕ ಅಮೃತ್‌ಪಾಲ್‌ ಸಿಂಗ್‌
  • ಪಂಜಾಬ್ಗೆ ಮರಳಿದ್ದಾನೆ ಎಂದು ಪೊಲೀಸರ ಹೇಳಿಕೆ ಬೆನ್ನಲ್ಲೇ ವಿಡಿಯೋ ಬಿಡುಗಡೆ

ಹನ್ನೆರೆಡು ದಿನಗಳಿಂದ ಪಂಜಾಬ್ ಪೊಲೀಸರಿಂದ ತಲೆತಪ್ಪಿಸಿಕೊಂಡಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್, ಬುಧವಾರ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ತಾನು ತಲೆಮರೆಸಿಕೊಂಡಿರುವುದಾಗಿ ತಿಳಿಸಿದ್ದಾನೆ.

ಅಮೃತಪಾಲ್ ಸಿಂಗ್ ಪಂಜಾಬ್‌ಗೆ ಮರಳಿದ್ದಾನೆ ಮತ್ತು ಆತ ಶರಣಾಗಲು ಯೋಜಿಸಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳುತ್ತಿದ್ದಂತೆ ವಿಡಿಯೋ ಬಿಡುಗಡೆಯಾಗಿದೆ.

“ಪಂಜಾಬ್‌ ಸರ್ಕಾರಕ್ಕೆ ನನ್ನನ್ನು ಬಂಧಿಸುವ ಉದ್ದೇಶವಿದ್ದರೆ, ಪೊಲೀಸರು ನನ್ನ ಮನೆಗೆ ಆಗಮಿಸಿದ್ದರೆ ನಾನೇ ಶರಣಾಗುತ್ತಿದ್ದೆ. ಆದರೆ ಅವರ ಉದ್ದೇಶ ಬೇರೆ ಇದ್ದಂತಿದೆ. ನನ್ನನ್ನು ಬಂಧಿಸಲು ಕಳುಹಿಸಲಾದ ಲಕ್ಷಗಟ್ಟಲೆ ಪೊಲೀಸರ ಪ್ರಯತ್ನದಿಂದ ದೇವರು ನನ್ನನ್ನು ರಕ್ಷಿಸಿದ್ದಾನೆ” ಎಂದು ವಿಡಿಯೋದಲ್ಲಿ ತಿಳಿಸಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ವಿವಾದಾತ್ಮಕ ಪೂತನಿ ಹೇಳಿಕೆ; ರಾಜಕೀಯ ಕೆಸರೆರಚಾಟಕ್ಕೆ ಮಹಿಳೆಯರು ಗುರಿ

“ಅಂದಿನ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಆಳ್ವಿಕೆಯಲ್ಲಿ ಸಿಖ್ಖರಿಗೆ ಏನು ಮಾಡಲಾಯಿತು, ಈಗ ಅದನ್ನೇ ಮಾಡಲಾಗುತ್ತಿದೆ. ನನ್ನ ಪರವಾಗಿ ಪ್ರತಿಭಟನೆ ನಡೆಸಿದ ಎಲ್ಲ ಸಂಘ ಸಂಸ್ಥೆಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಸ್ಥಿತಿ ಅರ್ಥ ಮಾಡಿಕೊಳ್ಳಬೇಕಾದರೆ ಇದು ಕೇವಲ ನನ್ನ ಬಂಧನದ ವಿಚಾರವಲ್ಲ, ಇಡೀ ಸಿಖ್ ಸಮುದಾಯದ ಮೇಲಿನ ದಾಳಿ ಎಂದು ಸಮುದಾಯದವರು ಅರ್ಥಮಾಡಿಕೊಳ್ಳಬೇಕು. ನನಗೆ ಬಂಧನದ ಭಯವಿರಲಿಲ್ಲ. ಆದರೆ ಪಂಜಾಬ್‌ ಪೊಲೀಸರ ಉದ್ದೇಶ ಬೇರೆಯೇ ಇದ್ದಂತಿದೆ” ಎಂದು ಅಮೃತ್‌ ಪಾಲ್‌ ಸಿಂಗ್‌ ವಿಡಿಯೋದಲ್ಲಿ ತಿಳಿಸಿದ್ದಾನೆ.  

ಸಿಖ್ಖರಿಗೆ ಪ್ರತ್ಯೇಕ ರಾಜ್ಯದ ಬೇಡಿಕೆ ಬೆಂಬಲಿಸುವ ಮತ್ತು ಕಳೆದ ತಿಂಗಳು ಪೊಲೀಸ್ ಠಾಣೆಯ ಮೇಲೆ ಸಶಸ್ತ್ರ ದಾಳಿ ನಡೆಸಿದ ಆರೋಪದ ಮೇಲೆ ಅಮೃತಪಾಲ್ ಸಿಂಗ್‌ನನ್ನು ಪೊಲೀಸರು ಕಳೆದ ಹನ್ನೆರಡು ದಿನಗಳಿಂದ ಹುಡುಕುತ್ತಿದ್ದಾರೆ.

ಕಪುರ್ತಲಾದ ಗುರುದ್ವಾರವೊಂದರ ಬಳಿ ಅಮೃತಪಾಲ್ ಸಿಂಗ್ ಬಿಟ್ಟು ಹೋಗಿದ್ದಎನ್ನಲಾದ ಕಾರನ್ನು ಪೊಲೀಸರು ಇಂದು (ಮಾರ್ಚ್‌ 29) ವಶಪಡಿಸಿಕೊಂಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಅಮೃತ್‌ ಪಾಲ್ ಹೋಶಿಯಾರ್‌ಪುರದ ಹಳ್ಳಿಗಳ ಮೂಲಕ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ. ಈತ ಪಾಟಿಯಾಲ ಹಾಗೂ ದೆಹಲಿಯಲ್ಲಿ ಇರುವ ಬಗ್ಗೆ ಪಂಜಾಬ್‌ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ್ದರು.

ಮಾರ್ಚ್ 18ರಿಂದ ಅಮೃತಪಾಲ್ ವಿರುದ್ಧ ಬಂಧನದ ಆದೇಶ ಜಾರಿಯಾದಾಗಿನಿಂದ ಪಂಜಾಬ್ ಪೊಲೀಸರು ಆತನ ಹಲವಾರು ಸಹಚರರನ್ನು ಬಂಧಿಸಿದ್ದಾರೆ. ಈತನ ವಿರುದ್ಧ ರಾಷ್ಟ್ರವಿರೋಧಿ ಚಟುವಟಿಕೆ ಸೇರಿದಂತೆ ಕನಿಷ್ಠ ಎಂಟು ಪ್ರಕರಣಗಳನ್ನು ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X