ಇಂಡಿ ತಾಲೂಕಿಗೆ ನಾಲ್ಕು ವಿದ್ಯುತ್ ಉಪಕೇಂದ್ರ ಮಂಜೂರು: ಎಸ್ ಎ ಬಿರಾದಾರ

Date:

Advertisements

ಕರ್ನಾಟಕ ವಿದ್ಯುತ್ ಪ್ರಸಾರ ನಿಗಮದಿಂದ ಇಂಡಿ ತಾಲೂಕಿನ ನಾಲ್ಕು ಕಡೆ 110 ಕೆವಿ ಉಪಕೇಂದ್ರಗಳಿಗೆ ಮಂಜೂರಾತಿ ದೊರೆತಿದೆ ಎಂದು ತಾಲೂಕು ಕಾರ್ಯ ನಿರ್ವಾಹಕ ಅಭಿಯಂತರ ಎಸ್ ಎ ಬಿರಾದಾರ ಮತ್ತು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಎಸ್ ಆರ್ ಮೆಡೆಗಾ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “ಶಿರಗೂರ ಇನಾಂ, ತಾಂಬಾ, ಹಡಲಸಂಗ ಮತ್ತು ಅಗಸನಾಳಗಳಲ್ಲಿ ಮಂಜುರಾತಿ ಆಗಿವೆ. ನಿಂಬಾಳ 110 ಕೆವಿ ಉಪಕೇಂದ್ರ ಪ್ರಗತಿ ಹಂತದಲ್ಲಿದೆ. ಕೇಂದ್ರ ಸ್ಥಾಪನೆಗೆ ಖಾಸಗಿಯವರಿಂದ ಜಾಗ ಪಡೆಯಲಾಗಿದೆ. ತಾಂತ್ರಿಕ ತಂಡದಿಂದ ಜಾಗ ಪರಿಶೀಲನೆ ಮಾತ್ರ ಬಾಕಿ ಇದೆ. ಪ್ರಕ್ರಿಯೆ ಟೆಂಡರ್‌ ಹಂತದಲ್ಲಿದ್ದು, ಹಂತ ಹಂತವಾಗಿ ಕಾಮಗಾರಿ ಆರಂಭಿಸಲು ಗಮನಹರಿಸಲಾಗುವುದು” ಎಂದರು.

“ಈಗಾಗಲೇ ಇಂಡಿ ಎರಡು, ಹಿರೇಬೇವನೂರ, ಲಚ್ಯಾಣ, ಅಥರ್ಗಾ, ತಡವಲಗಾ, ನಾದ ಕೆಡಿ, ತಾಂಬಾ, ಝಳಕಿ, ಹೋರ್ತಿ, ರೋಡಗಿ, ಮಸಳಿ, ನಿಂಬಾಳ, ಸಾತಲಗಾಂವ ಕ್ರಾಸ್, ಬೆರುಣಗಿ 110 ಕೆವಿ ಕೇಂದ್ರಗಳು ಈಗಾಗಲೇ ಚಾಲ್ತಿಯಲ್ಲಿವೆ. ರಾಜ್ಯದಲ್ಲಿಯೇ ವಿಜಯಪುರಕ್ಕೆ ಹೆಚ್ಚು ಕೇಂದ್ರಗಳು ಮಂಜೂರಾಗಿದ್ದು, ಇಂಡಿ ತಾಲೂಕು ರಾಜ್ಯದಲ್ಲಿಯೇ ಅತಿ ಹೆಚ್ಚು ಉಪಕೇಂದ್ರ ಮಂಜುರಾತಿ ಪಡೆದು ಪ್ರಥಮ ಸ್ಥಾನದಲ್ಲಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ: ಕೇಂದ್ರ ಆದೇಶ

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಮತ್ತು ಕರ್ನಾಟಕ ವಿದ್ಯುತ್ ಪ್ರಸಾರ ನಿಗಮ ಇವರ ಪ್ರಯತ್ನದಿಂದ ಇಂಡಿ ತಾಲೂಕಿಗೆ ನಾಲ್ಕು ಉಪಕೇಂದ್ರಗಳು ಮಂಜೂರಾಗಿವೆ. ಈ ಕಾರ್ಯದಲ್ಲಿ ಸಹಕರಿಸಿದ ಕೆಪಿಟಿಸಿಎಲ್ ಅಧಿಕಾರಿಗಳು ಹಾಗೂ ತಂಡದವರು ಮತ್ತು ಇಂಡಿಯ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ” ಎಂದರು.

“ಕೆಲವೆಡೆ 33/11 ಕೆ ವಿ ಮತ್ತೆ ಕೆಲವೆಡೆ 66/11 ಕೆ ವಿ ಕೇಂದ್ರ ಸ್ಥಾಪನೆಗೆ ಉದ್ದೇಶೀಸಲಾಗಿದೆ. ಉಪಕೇಂದ್ರ ಸ್ಥಾಪನೆಯಿಂದ ವೋಲ್ಟೇಜ್ ಸಮಸ್ಯೆ, ವಿದ್ಯುತ್ ಅಡಚಣೆ ಮೊದಲಾದ ತೊಡಕುಗಳು ಪರಿಹಾರವಾಗಲಿವೆ. ಕೃಷಿ, ತೋಟಗಾರಿಕೆ, ಕೈಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X