ಹನ್ನೊಂದು ವರ್ಷದಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ಮೋದಿ: ಕಾಂಗ್ರೆಸ್ ವಾಗ್ದಾಳಿ

Date:

Advertisements

ಹನ್ನೊಂದು ವರ್ಷದಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹನ್ನೊಂದು ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜವಾದ ಪತ್ರಿಕಾಗೋಷ್ಠಿ ನಡೆಸಲು ಸಾಧ್ಯವಾಗಿಲ್ಲ, ಮಾಧ್ಯಮ ಸಂದರ್ಶನಗಳೂ ಸ್ಕ್ರಿಪ್ಟ್ ಇಲ್ಲದೆ ನಡೆಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರಪಂಚದಾದ್ಯಂತದ ನಾಯಕರು ಕಾಲಕಾಲಕ್ಕೆ ಮುಕ್ತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಾರೆ. ಆದರೆ ನಮ್ಮಲ್ಲಿ 11 ವರ್ಷಗಳಿಂದ ಯಾವುದೇ ಪತ್ರಿಕಾಗೋಷ್ಠಿಗಳು ನಡೆದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿದ್ದೀರಾ? ‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

Advertisements

“ನರೇಂದ್ರ ಮೋದಿ ಕಳೆದ ವರ್ಷ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ್ದರು. ಆದರೆ ಅದರ ನಿರ್ಮಾಣ, ನಿರ್ದೇಶನ, ಸ್ಕ್ರಿಪ್ಟ್ ಮಾಡಿಕೊಂಡಿದ್ದರು. ಆ ಪೈಕಿ ಒಂದರಲ್ಲಿ ತಾನು ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಂಡು ಸುದ್ದಿಯಾದರು. ಪ್ರಧಾನಿ ಮೋದಿ ಯಾವುದೇ ಪೂರ್ವ ನಿರ್ಧಾರಿತ ಪತ್ರಿಕಾಗೋಷ್ಠಿಯನ್ನು ನಡೆಸುವ ಧೈರ್ಯವನ್ನು ಹೊಂದಿಲ್ಲ” ಎಂದು ಕಾಂಗ್ರೆಸ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇದು ಅವರ ಎಲ್ಲಾ ಪೂರ್ವವರ್ತಿಗಳಿಗಿಂತ ಸಂಪೂರ್ಣವಾಗಿ ಭಿನ್ನ. ಪ್ರಧಾನಿ ಮೋದಿ ಅವರ ಅತಿ ನೆಚ್ಚಿನ ದ್ವೇಷಿಯು ಪ್ರತಿ ಎರಡು ತಿಂಗಳಿಗೊಮ್ಮೆ ಸ್ವಯಂಪ್ರೇರಿತ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದರು. ಅಲ್ಲಿ ಅವರಿಗೆ ನಿರ್ದಯವಾಗಿ ಪ್ರಶ್ನಿಸಲಾಗುತ್ತಿತ್ತು. ಆದರೆ ಅವರು ತಾಳ್ಮೆಯಿಂದ ಉತ್ತರಿಸುತ್ತಿದ್ದರು. ಇದು ನಮ್ಮ ಪ್ರಜಾಪ್ರಭುತ್ವ ಅಡಿಪಾಯವನ್ನು ಸ್ಥಾಪಿಸುವ ಒಂದು ಮಾರ್ಗ” ಎಂದು ರಮೇಶ್ ಅವರು ಪರೋಕ್ಷವಾಗಿ ನಿರಂತರ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಅವರ ಉಲ್ಲೇಖ ಮಾಡಿದ್ದಾರೆ.

2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮೋದಿ ಮಾಧ್ಯಮಗೋಷ್ಠಿ ನಡೆಸಿಲ್ಲ. ನಿರಂತರ ವಾಗ್ದಾಳಿ ಬಳಿಕ ಸಂದರ್ಶನಗಳನ್ನು ನಡೆಸಲಾಗಿದೆ. ಆದರೆ ಅವೆಲ್ಲವೂ ಸ್ಕ್ರಿಪ್ಟ್ ಆಗಿತ್ತು, ಪೂರ್ವಯೋಜಿತವಾಗಿತ್ತು ಎಂಬುದು ವಿಡಿಯೋದಲ್ಲೇ ಸ್ಪಷ್ಟವಾಗಿ ಕಂಡುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X