ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಯರಗೇರಾ ಗ್ರಾಮದ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.
ಉರುಕುಂದ (42), ಲಕ್ಷ್ಮಣ (45) ಮೃತಪಟ್ಟವರು ಎಂದು ಹೇಳಲಾಗಿದೆ.
ಬೈಕ್ ಸವಾರರು ಯರಗೇರಾ ಕಡೆ ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಕಾರ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ.ಡಿಕ್ಕಿ ಹೊಡೆದ ರಭಸಕ್ಕೆ ಉರುಕುಂದ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದು, ಲಕ್ಷ್ಮಣ ಎಂಬುವನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಮಾನ್ವಿ | ಸುಂಕೇಶ್ವರ: ಗ್ರಾಮ ಪಂಚಾಯತಿ ಕಚೇರಿಗೆ ಗ್ರಾಮಸ್ಥರಿಂದ ಬೇಲಿ
ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡರೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
