ಹಾಸನ l ಅಕ್ರಮ ಸಂಬಂಧ: ಕುಟುಂಬಸ್ಥರನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿ

Date:

Advertisements

ಅನ್ಯ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪರಿಣಾಮ ಪತಿ, ಮಕ್ಕಳು ಹಾಗೂ ಅತ್ತೆ-ಮಾವನನ್ನು ವಿಷ ಹಾಕಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ, ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಕೆರಳೂರು ಗ್ರಾಮದಲ್ಲಿ ನಡೆದಿದೆ.

ಕೆರಳೂರು ಗ್ರಾಮದ ಬಂಧಿತ ಆರೋಪಿ ಮಹಿಳೆ ಚೈತ್ರ (33)l, ಹನ್ನೊಂದು ವರ್ಷಗಳ ಹಿಂದೆ ಗಜೇಂದ್ರ ಎಂಬವರ ಜೊತೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ, ಕಳೆದ ಮೂರು ವರ್ಷಗಳಿಂದ ಸಣ್ಣಪುಟ್ಟ ವಿಷಯಗಳಿಗೆ ಗಂಡನೊಂದಿಗೆ ಜಗಳವಾಡುತ್ತಿದ್ದ ಚೈತ್ರ, ಈ ನಡುವೆ ಪುನೀತ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು.

Screenshot 2025 06 08 20 18 11 94 40deb401b9ffe8e1df2f1cc5ba480b12

ಈ ಕುರಿತು ಗಂಡ, ಚೈತ್ರಳ ತಂದೆ-ತಾಯಿಗೆ ಮಾಹಿತಿ ತಿಳಿಸಿದ್ದರು. ಕುಟುಂಬಸ್ಥರ ರಾಜಿ ಪಂಚಾಯಿತಿಯ ನಂತರ ದಂಪತಿ ಕೆಲಕಾಲ ಚನ್ನಾಗಿ ಸಂಸಾರ ನಡೆಸುತ್ತಿದ್ದರು. ಮೊದಲಿನ ಹಾಗೆಯೇ, ಚೈತ್ರ ಮತ್ತೊರ್ವ ವ್ಯಕ್ತಿಯ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಳು,
ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮೊದಲೇ, ತನ್ನ ಸಂಬಂಧಕ್ಕೆ ಪತಿ, ಮಕ್ಕಳು ಹಾಗೂ ಅತ್ತೆ-ಮಾವ ಅಡ್ಡಿಯಾಗಬಹುದೆಂಬ ಅನುಮಾನದಿಂದ ಚೈತ್ರ, ಎಲ್ಲರನ್ನೂ ಸಾಮೂಹಿಕವಾಗಿ ಕೊಲೆ ಮಾಡಲು ಸಂಚು ರೂಪಿಸಿ, ಅಕ್ರಮ ಸಂಬಂಧ ಹೊಂದಿದ್ದ ಶಿವು ಎಂಬ ವ್ಯಕ್ತಿಯ ಸಹಕಾರದೊಂದಿಗೆ ಊಟ-ತಿಂಡಿಗಳಲ್ಲಿ ವಿಷಕಾರಿ ಮಾತ್ರೆಗಳನ್ನು ಬೆರೆಸುತ್ತಿದ್ದಳು.

Advertisements

ಇದನ್ನೂ ಓದಿದ್ದೀರಾ?ಹಾಸನ l ಹೇಮಾವತಿ ನದಿಯಲ್ಲಿ ಕಾಡಾನೆಗಳ ಗುಂಪು

ಈ ವಿಷಯ ತಿಳಿದ ಚೈತ್ರಳ ಗಂಡ ಗಜೇಂದ್ರ, ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆ ಕುರಿತು ಅಧಿಕಾರಿಗಳು ಚೈತ್ರ ಹಾಗೂ ಪ್ರಿಯಕರ ಶಿವು ವಿರುದ್ಧ ತನಿಖೆ ಆರಂಭಿಸಿದ್ದಾರೆ. ಸುತ್ತಮುತ್ತ ಗ್ರಾಮಸ್ಥರಿಗೆ ಆತಂಕ ಸೃಷ್ಟಿಯಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X