ಫ್ರೆಂಚ್ ಓಪನ್ ಟೆನಿಸ್ ಕಿರೀಟಕ್ಕೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಝ್, ಹೊಸ ಇತಿಹಾಸ ಸೃಷ್ಟಿ

Date:

Advertisements

ಇಟಲಿಯ ಯಾನಿಕ್ ಸಿನ್ನರ್ ಹಾಗೂ ಸ್ಟೇನ್​ನ ಕಾರ್ಲೋಸ್ ಅಲ್ಕರಾಝ್ ನಡುವೆ ಕಂಡು ಬಂದ ಫ್ರೆಂಚ್ ಓಪನ್‌ ಟೆನಿಸ್ ಫೈನಲ್​ ಪಂದ್ಯ ಹೊಸ ಇತಿಹಾಸ ಸೃಷ್ಟಿಸಿದೆ. ಈ ಇತಿಹಾಸದೊಂದಿಗೆ ಅಲ್ಕರಾಝ್ ಫ್ರೆಂಚ್ ಓಪನ್ ಕಿರೀಟಕ್ಕೆ ಮುತ್ತಿಕ್ಕಿದ್ದಾರೆ.

ಪ್ಯಾರಿಸ್​ನ ರೋಲ್ಯಾಂಡ್ ಗ್ಯಾರೋಸ್​ ಮೈದಾನದಲ್ಲಿ ನಡೆದ ಫ್ರೆಂಚ್ ಓಪನ್ ಫೈನಲ್​ನಲ್ಲಿ ಕಾರ್ಲೋಸ್ ಅಲ್ಕರಾಝ್ ಅವರು ಯಾನಿಕ್ ಸಿನ್ನರ್ ಅವರನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಇದು ಕ್ಲೇ ಕೋರ್ಟ್​ನಲ್ಲಿ 22 ವರ್ಷದ ಅಲ್ಕರಾಝ್ ಅವರ 2ನೇ ಪ್ರಶಸ್ತಿಯಾಗಿದೆ.

ಈ ಬಾರಿಯ ಫ್ರೆಂಚ್ ಓಪನ್ ಫೈನಲ್ ಪಂದ್ಯ ನಡೆದದ್ದು ಬರೋಬ್ಬರಿ 5 ಗಂಟೆ 29 ನಿಮಿಷ. ಅಂದರೆ ರೋಲ್ಯಾಂಡ್ ಗ್ಯಾರೋಸ್​ನಲ್ಲಿ ನಡೆದ ಈ ಯುಗದ ಅತ್ಯಂತ ದೀರ್ಘಾವಧಿಯ ಫೈನಲ್ ಪಂದ್ಯ ಇದಾಗಿದೆ.

Advertisements

ಇದಕ್ಕೂ ಮುನ್ನ ಓಪನ್ ಯುಗದಲ್ಲಿ ಅತಿ ದೀರ್ಘಾವಧಿಯ ಫ್ರೆಂಚ್ ಓಪನ್ ಫೈನಲ್ ನಡೆದದ್ದು 1982 ರಲ್ಲಿ. ಅಂದು ಮ್ಯಾಟ್ಸ್ ವಿಲಾಂಡರ್ ಹಾಗೂ ಗಿಲ್ಲೆರ್ಮೊ ವಿಲಾಸ್ 4 ಗಂಟೆ 47 ನಿಮಿಷಗಳ ಫೈನಲ್ ಮ್ಯಾಚ್ ಆಡಿ ಇತಿಹಾಸ ನಿರ್ಮಿಸಿದ್ದರು.

AA1FGCbB

ಜಿದ್ದಾಜಿದ್ದಿನ ಪೈಪೋಟಿ

ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದ್ದ ಫೈನಲ್‌ ಪಂದ್ಯದ ಮೊದಲ ಸೆಟ್ ಅನ್ನು ಯಾನಿಕ್ ಸಿನ್ನರ್ ಅವರು 4-6 ಅಂತರದಿಂದ ಜಯ ಸಾಧಿಸಿದ್ದರು. ದ್ವಿತೀಯ ಸೆಟ್​ನಲ್ಲಿ ಅಲ್ಕರಾಝ್ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದರೂ ಅಂತಿಮವಾಗಿ 6-7 ಅಂತರದಿಂದ ಸೋಲೊಪ್ಪಿಕೊಂಡರು.

ಆದರೆ, ಮೂರನೇ ಸೆಟ್​ನಲ್ಲಿ ಅತ್ಯುತ್ತಮ ಸರ್ವ್​ಗಳ ಮೂಲಕ ಗಮನ ಸೆಳೆದ ಕಾರ್ಲೋಸ್ ಅಲ್ಕರಾಝ್, 6-4 ಅಂತರದಿಂದ ಯಾನಿಕ್ ಸಿನ್ನರ್​ಗೆ ಸೋಲುಣಿಸಿದರು. ಬಳಿಕ ನಡೆದ ಎರಡು ಸೆಟ್​ಗಳು ರಣರೋಚಕ ಕಾಳಗಕ್ಕೆ ಸಾಕ್ಷಿಯಾಯಿತು. ದಾಳಿಗೆ ಪ್ರತಿದಾಳಿ ಎಂಬಂತೆ ಕಂಡು ಬಂದ 4ನೇ ಸೆಟ್ ಅನ್ನು ಅಲ್ಕರಾಝ್ 7-6 ಗೆದ್ದುಕೊಂಡರು.

ಕೊನೆಯ ಸೆಟ್​ನಲ್ಲಿ ತನ್ನ ಅನುಭವವನ್ನು ಧಾರೆಯೆರೆದ ಯಾನಿಕ್ ಸಿನ್ನರ್ ಕಾರ್ಲೊಸ್ ಮೇಲೆ ಪ್ರಬಲ ಒತ್ತಡ ಹಾಕಿದರು. ಆದರೆ ಅಂತಿಮ ಸುತ್ತಿನಲ್ಲಿ ಛಲದಂಕ ಮಲ್ಲನಂತೆ ಆಟವಾಡಿದ ಕಾರ್ಲೋಸ್ ಅಲ್ಕರಾಝ್ 7-6 ಅಂತರದಿಂದ ಗೆದ್ದುಕೊಂಡರು. ಆ ಮೂಲಕ ಯಾನಿಕ್ ಸಿನ್ನರ್​ಗೆ ಸೋಲುಣಿಸಿ ಕಾರ್ಲೋಸ್ ಅಲ್ಕರಾಝ್ ಎರಡನೇ ಬಾರಿ ಫ್ರೆಂಚ್ ಓಪನ್​ ಕಿರೀಟ ಮುಡಿಗೇರಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X