ಗೃಹ ಖಾತೆ ಬದಲಿಸಲು ಪರಮೇಶ್ವರ್‌ ಕೇಳುತ್ತಿದ್ದರೂ ಬದಲಾವಣೆ ಏಕಿಲ್ಲ: ಆರ್‌ ಅಶೋಕ್‌ ಪ್ರಶ್ನೆ

Date:

Advertisements

ಗೃಹ ಖಾತೆ ಬದಲಿಸಿ ಅಥವಾ ರಾಜೀನಾಮೆ ಸ್ವೀಕರಿಸಿ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಸ್ಪಷ್ಟವಾಗಿ ಕೇಳುತ್ತಿದ್ದರೂ ಅವರ ಖಾತೆ ಯಾಕೆ ಬದಲಾವಣೆ ಮಾಡುತ್ತಿಲ್ಲ ಸಿಎಂ ಸಿದ್ದರಾಮಯ್ಯ ನವರೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಗೃಹ ಇಲಾಖೆ ಸಹವಾಸ ಸಾಕು, ಖಾತೆ ಬದಲಿಸಿ ಎಂದು ಪರಮೇಶ್ವರ್‌ ಅವರು ಸಿಎಂ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ವರದಿಯೊಂದನ್ನು ಟ್ವೀಟ್‌ ಮಾಡಿರುವ ಅಶೋಕ್‌, “ಕಾಂಗ್ರೆಸ್‌ ಸರ್ಕಾರದಲ್ಲಿ ಗೃಹ ಖಾತೆ ನಿರ್ವಹಣೆ ಮಾಡಬಲ್ಲ ಸಮರ್ಥರು, ಯೋಗ್ಯರು ಬೇರೆ ಯಾರೂ ಇಲ್ಲವೇ” ಎಂದು ಕೇಳಿದ್ದಾರೆ.

ಗೃಹ ಇಲಾಖೆ ಸಹವಾಸ ಸಾಕು ಎಂದಿರುವ ಸಚಿವ ಡಾ.ಜಿ.ಪರಮೇಶ್ವರ್‌ ತಮ್ಮ ಖಾತೆ ಬದಲಿಸಿ. ಇಲ್ಲವಾದರೆ ರಾಜೀನಾಮೆ ಸ್ವೀಕರಿಸಿ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

Advertisements

ಆರ್‌ಸಿಬಿ ವಿಜಯೋತ್ಸವದ ಸುತ್ತ ನಡೆದ ಘಟನಾವಳಿ ಕಾರಣ ಖಾತೆ ಬದಲಿಸುವಂತೆ ಸಿಎಂ ಹಾಗೂ ಹೈಕಮಾಂಡ್ ಬಳಿ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಪರಮೇಶ್ವರ್ ಅವರಿಗೆ ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಬಿಜೆಪಿಯ ಒಂದು ಗುಂಪು ವಿರೋಧ ಪಕ್ಷದ ನಾಯಕನ ಬದಲಾವಣೆ ಮಾಡಲು ಒತ್ತಾಯ ಮಾಡುವುದು ಗುಟ್ಟಾಗಿ ಉಳಿದಿಲ್ಲ,, ಆದರೂ ಹೈಕಮಾಂಡ್ ಯಾವ ಕ್ರಮ ಕೈಗೊಂಡಿಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X