ವಿಜಯಪುರ | ಅಂಬೇಡ್ಕರ್‌ ಚಿಂತನೆಗೆ ಹೊಸ ವೇದಿಕೆ; ಬುದ್ಧವಿಹಾರದಲ್ಲಿ ಗ್ರಂಥಾಲಯ

Date:

Advertisements

ಬಾಬಾಸಾಹೇಬ ಅಂಬೇಡ್ಕರ್ ವಿಚಾರಗಳ ಪ್ರಚಾರ ಮತ್ತು ಪ್ರಸಾರದ ದೃಷ್ಟಿಯಿಂದ ಬುದ್ಧವಿಹಾರದಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿದ್ದು, ಈ ಗ್ರಂಥಾಲಯವು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿದೆ. ಎಲ್ಲರೂ ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿಜಯಪುರದ ಬೌದ್ಧ ವಿಹಾರದ ನಿರ್ದೇಶಕ ರಾಜಶೇಖರ ಯಡಳ್ಳಿ ಮನವಿ ಮಾಡಿದರು.

ನಗರದ ಸಾರಿಪುತ್ರ-ಬೌದ್ಧದಮ್ಮ ಬೌದ್ಧವಿಹಾರ ಗ್ರಂಥಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಮಾಜದ ವಿದ್ಯಾರ್ಥಿ ಯುವಕರು ಹಾಗೂ ಸಾರ್ವಜನಿಕರು ಬೌದ್ಧವಿಹಾರದ ಗ್ರಂಥಾಲಯವನ್ನು ಸದುಪಯೋಗ ಮಾಡಿಕೊಂಡು ಬುದ್ಧರ ವಿಚಾರ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರಧಾರೆಗಳನ್ನು ನಾಡಿನಾದ್ಯಂತ ಪಸರಿಸುವ ಕೆಲಸ ಆಗಬೇಕು” ಎಂದರು.

ಈ ವೇಳೆ ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಕಲ್ಲಪ್ಪ ತೊರವಿ ಅವರು 5000 ರೂ. ಮುಖಬೆಲೆಯ ಬಾಬಾಸಾಹೇಬ ಅಂಬೇಡ್ಕರ್ ಅವರ ಭಾಷಣ ಮತ್ತು ಬರಹಗಳ ಇಂಗ್ಲಿಷ್ ಆವೃತ್ತಿಗಳ ಗ್ರಂಥದಾನ ಮಾಡಿದರು.

Advertisements

ಬುದ್ಧವಿಹಾರಕ್ಕೆ ಆಗಮಿಸಿದ ಕಲ್ಲಪ್ಪ ತೊರವಿಯವರು ಸಾಮೂಹಿಕ ಬುದ್ಧವಂದನೆಯ ನಂತರ ಬೌದ್ಧವಿಹಾರ ನಿರ್ಮಾಣ ಸಮಿತಿಯ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಅವರಿಗೆ ಡಾ. ಅಂಬೇಡ್ಕರ್ ಸಂಪುಟಗಳನ್ನು ಅರ್ಪಿಸಿದರು.

ಇದನ್ನೂ ಓದಿ: ವಿಜಯಪುರ | ಕೃಷಿ ಉಪಕರಣಗಳ ಸಮರ್ಪಕ ಪೂರೈಕೆಗೆ ರೈತ ಸಂಘ ಆಗ್ರಹ

ಬುದ್ಧವಿಹಾರ ನಿರ್ಮಾಣ ಸಮಿತಿಯ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕರಾದ ಅನಿಲ ಹೊಸಮನಿ, ರಾಜೇಶ ತೊರವಿ, ಮನೋಜ ಕೋಟ್ಯಾಳಕರ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚೆನ್ನು ಕಟ್ಟಿಮನಿ, ಮುಖಂಡರಾದ ಬಸವರಾಜ ಬ್ಯಾಳಿ, ಎಂ.ಬಿ. ಹಳ್ಳದಮನಿ, ಕೆ.ಎಂ. ಶಿವಶರಣ, ರಮೇಶ ಹಾದಿಮನಿ, ಪ್ರತಾಪ ಚಿಕ್ಕಲಕಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X