ದೇವನಹಳ್ಳಿ | ಜೈಲು ನಿರ್ಮಾಣ, 626 ಮರಗಳಿಗೆ ಕೊಡಲಿ ಹಾಕಲು ಅರಣ್ಯ ಇಲಾಖೆ ಸಜ್ಜು

Date:

Advertisements

ಕರ್ನಾಟಕ ರಾಜ್ಯ ಪೋಲಿಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಸಲ್ಲಿಸಿರುವ ನೂತನ ಕಾರಾಗೃಹ ನಿರ್ಮಾಣ ಕಾಮಗಾರಿಗಾಗಿ ವಿವಿಧ ಜಾತಿಯ 626 ಮರಗಳನ್ನು ಸಂಪೂರ್ಣವಾಗಿ ಕತ್ತರಿಸಲು ಬೆಂಗಳೂರು ಗ್ರಾಮಾಂತರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವ್ಯಾಪ್ತಿಯ ಸರ್ವೇ ನಂ. 100 ರ ಜಮೀನಿನಲ್ಲಿ 600 ಬಂದಿಗಳ ಸಾಮರ್ಥ್ಯದ ನೂತನ ಕೇಂದ್ರ ಕಾರಾಗೃಹದ ವಸತಿಯೇತರ ಕಟ್ಟಡ ಮತ್ತು ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು ಅರಣ್ಯ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಿದೆ.

ಪ್ರಸ್ತಾಪಿತ ಪ್ರಸ್ತಾವಣೆಯಲ್ಲಿ ಸರ್ವೇ ನಂ. 100 ರ ಜಮೀನಿನಲ್ಲಿ ಕಾರಾಗೃಹ ನಿರ್ಮಣದ ಕಾಮಗಾರಿಗೆ ಅಡ್ಡಬರುತ್ತಿರುವ ವಿವಿಧ ಜಾತಿಯ 626 ಮರಗಳನ್ನು ಬುಡಸಮೇತ ನಾಶಗೊಳಿಸುವಂತೆ ದೇವನಹಳ್ಳಿಯ ಬಯಲು ಕಾರಾಗೃಹ ಅಧೀಕ್ಷಕರು ಅರಣ್ಯ ಇಲಾಖೆಯನ್ನು ಕೋರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ

ಈಗ ಅರಣ್ಯ ಇಲಾಖೆ 626 ಮರಗಳಿಗೆ ಕೊಡಲಿ ಏಟು ಹಾಕಲು ಸಜ್ಜಾಗಿ ನಿಂತಿದೆ. ಪ್ರಸ್ತಾಪಿತ ಸರ್ವೇ ನಂಬರ್‌ನಲ್ಲಿ ಮರಗಳನ್ನು ತೆರವುಗೊಳಿಸುವ ಸಂಬಂಧ ಸಾರ್ವಜನಿಕರ ಆಕ್ಷೇಪಣೆ / ಸಲಹೆಗಳಿದ್ದಲ್ಲಿ ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯಿದೆ 1976 ಸೆಕ್ಷನ್ 8(3)(vii) ಪ್ರಕಾರ ಸಲಹೆ ಸೂಚನೆ ನೀಡಲು ಬೆಂಗಳೂರು ಗ್ರಾಮಾಂತರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಇಂದು (ಜೂ. 9) ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಪ್ರಕಟಣೆ ಹೊರಡಿಸಿದ ದಿನಾಂಕದಿಂದ 10 ದಿನಗಳೊಳಗಾಗಿ ಸೂಚನೆ, ಆಕ್ಷೇಪಣೆಗಳು ಪ್ರಸ್ತಾವಿತ ಯೋಜನೆಗೆ ಮಾತ್ರ ಸಲ್ಲಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ಸಸಿಗಳು ಪೂರ್ಣ ಪಕ್ವತೆಯನ್ನು ತಲುಪಿ ಮರವಾಗಲು 10-20 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತವೆ. ಅರಣ್ಯವನ್ನು ರಕ್ಷಿಸಬೇಕಾದ ಇಲಾಖೆಯೇ ಬರೊಬ್ಬರಿ 626 ಮರಗಳ ಮಾರಣಹೋಮಕ್ಕೆ ಮುಂದಾಗಿರವುದು ಇಲಾಖೆಗೆ ಒಪ್ಪುವ ನಡೆಯಲ್ಲ.

WhatsApp Image 2025 06 09 at 12.43.37 PM 1 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ...

ದೇವನಹಳ್ಳಿ | ವಕೀಲರ ಮೇಲೆ ಹಲ್ಲೆ ಪ್ರಕರಣ; ಪಾರದರ್ಶಕ ತನಿಖೆಗೆ ಆಗ್ರಹ

ದೇವನಹಳ್ಳಿಯ ಯುವ ವಕೀಲ ಸಂದೀಪ್ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್...

ದೇವನಹಳ್ಳಿ ಭೂಮಿ ಹೋರಾಟ | ‘ರೈತರೊಂದಿಗೆ ನಾವಿದ್ದೇವೆ’- ಬೆಂಬಲ ಘೋಷಿಸಿದ ಹಿರಿಯ ನಟರು, ನಿರ್ದೇಶಕರು, ಸಾಹಿತಿಗಳು

ದೇವನಹಳ್ಳಿ ಭೂಸ್ವಾಧೀನದ ವಿರುದ್ಧವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಚಿತ್ರರಂಗದ ಹಿರಿಯ ನಟರು,...

ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ...

Download Eedina App Android / iOS

X