ದಾವಣಗೆರೆ | ದಲಿತ ಸಂಘಟನೆಗಳ ಮುಖಂಡರಿಂದ ಕರ್ನಾಟಕದ ಅಂಬೇಡ್ಕರ್ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನ ಆಚರಣೆ

Date:

Advertisements

ಕರ್ನಾಟಕದ ಅಂಬೇಡ್ಕರ್ ಎಂದೇ ಹೆಸರಾಗಿರುವ ಸಾಮಾಜಿಕ, ದಲಿತ ಹಕ್ಕುಗಳ ಹೋರಾಟಗಾರ, ದಲಿತ ಸಾಹಿತ್ಯ ಸಂಘಟನೆಯ ಪ್ರವರ್ತಕ, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ದಲಿತ ಚೇತನ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನಾಚರಣೆಯನ್ನು ದಾವಣಗೆರೆ ಜಿಲ್ಲೆ ಹರಿಹರ ನಗರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮೈತ್ರಿವನದ ಅವರ ಸಮಾದಿ ಬಳಿ ದಲಿತ ಸಂಘಟನೆಗಳು ಹೋರಾಟಗಾರರು ಸೇರಿ ಆಚರಿಸುವ ಮೂಲಕ ಅವರಿಗೆ ಗೌರವ ನಮನ ಸಲ್ಲಿಸಿದರು.

IMG 20250609 WA0083

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, “ಎಲ್ಲಾ ದಲಿತ ಸಂಘಟನೆಗಳು ಹುಟ್ಟಲು ಪ್ರೊ.ಕೃಷ್ಣಪ್ಪನವರು ಸ್ಥಾಪಿಸಿದ ದಲಿತ ಸಂಘರ್ಷ ಸಮಿತಿ ಮೂಲಕಾರಣ. ದಲಿತರ, ಶೋಷಿತರ ಹಕ್ಕುಗಳಿಗೆ ಹೋರಾಟ ನಡೆಸಿ ಸ್ವಾಭಿಮಾನದ ಬದುಕು ತಿಳಿಸಿ ಕೊಟ್ಟವರು. ಅವರ ಹೋರಾಟ, ಆದರ್ಶಗಳೇ ಇಂದಿನವರಿಗೆ ಸ್ಪೂರ್ತಿ” ಎಂದು ಸ್ಮರಿಸಿದರು.

1002126274

ಈ ವೇಳೆ ಮುಖಂಡರಾದ ಹರಿಹರ ಮಹಾಂತೇಶ, ಹರೋಸಾಗರ ಸಿದ್ದರಾಮಣ್ಣ, ವಿಜಯಲಕ್ಷ್ಮಿ, ನಾಗರಾಜ್ ಚಿತ್ತಾನಳ್ಳಿ, ಪ್ರದೀಪ್, ದಲಿತ ವಾಣಿಜ್ಯ ಮಂಡಳಿ ಅಧ್ಯಕ್ಷ ಮಂಜು ಕಬ್ಬೂರು, ಶಾಂತಿನಗರ ಮಂಜುನಾಥ್, ಹುಲಿಕಟ್ಟೆ ಚನ್ನಬಸಪ್ಪ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Advertisements
1002126275 1

ದಲಿತ ಚೇತನ ಪ್ರೊ.ಬಿ ಕೃಷ್ಣಪ್ಪ;
ಜೂನ್ 9, 1938ರಲ್ಲಿ ಹರಿಹರದಲ್ಲಿ ಜನಿಸಿದ ಪ್ರೊ.ಬಸಪ್ಪ ಕೃಷ್ಣಪ್ಪನವರು ಸುಮಾರು ಮೂವತ್ತು ವರ್ಷಗಳ ಕಾಲ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ನಂತರ ಪ್ರಾಂಶುಪಾಲರಾಗಿ ನಿವೃತ್ತರಾದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಾಲ್ಯ ವಿವಾಹಕ್ಕೆ ಯತ್ನ ಮದುವೆ ಬೇಡವೆಂದು ಅಂಗಲಾಚಿದ ಬಾಲಕಿಯ ರಕ್ಷಣೆ; ಐವರ ಮೇಲೆ ದೂರು ದಾಖಲು

70ರ ದಶಕದಲ್ಲಿ ಬಸವಲಿಂಗಪ್ಪ ಸಚಿವರಾಗಿದ್ದಾಗ ಕನ್ನಡ ಸಾಹಿತ್ಯವನ್ನು ಬೂಸಾ ಎಂದು ಕರೆದಿದ್ದು, ನಂತರದಲ್ಲಿ ಆದ ಬೆಳವಣಿಗೆಗೆಳಿಂದ ಪ್ರಭಾವಿತರಾದ ಕೃಷ್ಣಪ್ಪನವರು
ಸಮಾನ ಮನಸ್ಕರೊಂದಿಗೆ ದಲಿತ ಸಾಹಿತ್ಯ ಚಳುವಳಿ ಹುಟ್ಟಿಗೆ ಕಾರಣರಾದರು.‌ ಮುಂದೆ ಅದು ದಲಿತ ಸಂಘರ್ಷ ಸಮಿತಿಯ ರೂಪ ತಳೆದು ಅದರ ಸಂಸ್ಥಾಪಕ ಅಧ್ಯಕ್ಷರಾಗಿ ದಲಿತ ಹಕ್ಕುಗಳಿಗೆ, ಅಸ್ಪೃಶ್ಯತೆ ನಿವಾರಣೆಗೆ, ಶೋಷಣೆ ತಡೆಯಲು ಅನೇಕ ಹೋರಾಟ ಕೈಗೊಂಡರು.‌ ಕೇವಲ ದಲಿತರಲ್ಲದೇ ಎಲ್ಲಾ ವರ್ಗದ ಬಡ ಜನರಿಗಾಗುವ ಶೋಷಣೆ, ದೌರ್ಜನ್ಯವನ್ನು ಖಂಡಿಸಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೃಷ್ಣಪ್ಪನವರು ಕಾರ್ಯನಿರ್ವಹಿಸಿದ್ದು ಅವರ ಹಿರಿಮೆ.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X