ಹನಿಮೂನ್ ಕೊಲೆ ಪ್ರಕರಣ | ದರೋಡೆಕೋರರು ಗಂಡನನ್ನು ಕೊಂದರು: ಆರೋಪಿ ಸೋನಮ್ ರಘುವಂಶಿ

Date:

Advertisements

ಹನಿಮೂನ್‌ಗೆ ಹೋಗಿದ್ದ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ “ದರೋಡೆಕೋರರು ನನ್ನ ಗಂಡನನ್ನು ಕೊಂದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು ಯತ್ನಿಸಿದ್ದರು” ಎಂದು ಹೇಳಿಕೊಂಡಿದ್ದಾರೆ. ಹನಿಮೂನ್ ಕೊಲೆ ಪ್ರಕರಣ ಎಂದೆ ಕರೆಯಲಾಗುತ್ತಿರುವ ಈ ಪ್ರಕರಣವು ಸದ್ಯ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಮಧ್ಯಪ್ರದೇಶದ ಇಂದೋರ್ ಮೂಲದ ರಾಜ ರಘುವಂಶಿ ಮತ್ತು ಸೋನಮ್ ರಘುವಂಶಿಯು ಮೇ 11ರಂದು ವಿವಾಹವಾಗಿದ್ದು ತಮ್ಮ ಹನಿಮೂನ್‌ಗಾಗಿ ಶಿಲ್ಲಾಂಗ್‌ಗೆ ಹೋಗಿದ್ದರು, ಬಳಿಕ ಮೇ 23ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಪೈಕಿ ರಾಜಾ ಅವರ ಮೃತದೇಹವು ಜೂನ್ 2ರಂದು ಪೂರ್ವ ಖಾಸಿ ಬೆಟ್ಟದ ಜಿಲ್ಲೆಯ ಕಮರಿಯಲ್ಲಿ ಪತ್ತೆಯಾಗಿತ್ತು. ಆದರೆ ಸೋನಮ್ ಪತ್ತೆಯಾಗಿರಲಿಲ್ಲ.

ಇದನ್ನು ಓದಿದ್ದೀರಾ? ಜಾತಿ ಸಮೀಕ್ಷೆ ವಿರೋಧಿಸುತ್ತಿರುವವರು ಲೂಟಿಕೋರರು, ದರೋಡೆಕೋರರು: ಪ್ರೊ.ರವಿವರ್ಮಕುಮಾರ್‌

Advertisements

ಸೋನಮ್‌ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಸೋಮವಾರ ಉತ್ತರ ಪ್ರದೇಶ ಗಾಜಿಪುರದ ಪೊಲೀಸರ ಮುಂದೆ ಸೋಮವಾರ ಸೋನಮ್ ಶರಣಾಗಿದ್ದರು. ಆಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೇಘಾಲಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಈ ಕೊಲೆಗೆ ಸೋನಮ್ ಅವರೇ ಸುಪಾರಿ ನೀಡಿದ್ದಾರೆ ಎಂದಿದ್ದಾರೆ.

ಹಾಗಾಗಿ ಪೊಲೀಸರು ಸೋನಮ್ ಬಂಧನ ಮಾಡಿದ್ದಾರೆ. ಢಾಬಾ ಒಂದರಲ್ಲಿ ಸಹಾಯ ಕೋರಿ ಸೋನಮ್ ಬಂದಿದ್ದರು. ಬಳಿಕ ಅಲ್ಲಿಂದಲೇ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. “ಸೋನಮ್ ತುಂಬಾ ದುಖಿಃತರಾಗಿದ್ದರು” ಎಂದು ಢಾಬಾ ಮಾಲೀಕ ಸಾಹಿಲ್ ಹೇಳಿದ್ದಾರೆ.

ಮೇಘಾಲಯ ಪೊಲೀಸರು ಸೋನಮ್ ತನ್ನ ಪತಿಯ ಕೊಲೆಗಾಗಿ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ಸೋನಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಘಾಜಿಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋನಮ್ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X