ರಾಯಚೂರು | ಕಮೀಷನರ್ ದಯಾನಂದ ಅವರ ಅಮಾನತು ಕೂಡಲೇ ಹಿಂಪಡೆಯಲು ಆಗ್ರಹ

Date:

Advertisements

ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವೆಂದು ಬಿಂಬಿಸಿ ರಾಜ್ಯ ಸರ್ಕಾರ ಬೆಂಗಳೂರು ನಗರ ಕಮಿಷನರ್ ದಯಾನಂದ ಅವರನ್ನು ಅಮಾನತ್ ಮಾಡಿರುವುದು ತೀವ್ರ ಖಂಡನೀಯ ಕೂಡಲೇ ರದ್ದುಗೊಳಿಸಿ ಹುದ್ದೆಯಲ್ಲಿ ಮುಂದುವರೆಸಬೇಕು ಎಂದು ವಾಲ್ಮೀಕಿ ನಾಯಕ ಸಂಘಟನೆಯಿಂದ ವತಿಯಿಂದ ದೇವದುರ್ಗ ತಹಶೀಲ್ದಾರ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸರಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ದಕ್ಷ ಪ್ರಾಮಾಣೀಕತೆಯಿಂದ ಕಾರ್ಯವನ್ನು ನಿರ್ವಹಿಸುತ್ತಿರುವ ನಾಯಕ ಸಮಾಜಕ್ಕೆ ಸೇರಿದವರಾದ ದಯಾನಂದ ಐ.ಪಿ.ಎಸ್ ಅಧಿಕಾರಿಯನ್ನು ವಿನಾಕಾರಣ ಅಮಾನತ್ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಹಾಗೂ ಇದೇ ಮೊದಲು ಬಾರಿಗೆ ಕಮಿಷನರ್‌ನನ್ನು ಅಮಾನತ್ ಮಾಡಿರುವದರ ಹಿಂದೆ ಜಾತಿ ರಾಜಕಾರಣ ಇದೆ ಎಂದು ಆಗ್ರಹಿಸಿದರು.

ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದೆ ಹೊರತು ಅಧಿಕಾರಿಗಳ ನಿರ್ಲಕ್ಷ ತನದಿಂದ ಸಂಭವಿಸಿಲ್ಲ.ಡಿ.ಸಿ.ಎಂ ಹಾಗೂ ಸಿ.ಎಂ ನಡುವೆ ಗುಂಪುಗಾರಿಕೆಯಿಂದ ಅಮಾಯಕರ 11 ಜನರ ಪ್ರಾಣ ಹೋಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಸುಮಾರು ಮೂರ್ನಾಲ್ಕು ಲಕ್ಷ ಜನದಟ್ಟಣೆಗೆ ಒಂದು ವಾರ ಸಿದ್ಧತೆಯಾಗಿರಬೇಕು. ಸಿದ್ದತೆವಿಲ್ಲದೆ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಚನ್ನಬಸವಪ್ಪ ಬೆಟ್ಟದೂರು ನೆನಪಿನ ದಿನಾಚರಣೆ ; ಜೂನ್ 13 ರಂದು ಅಧ್ಯಯನ ಶಿಬಿರ

ಅಭಿವೃದ್ಧಿ ಕಾರ್ಯದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿದ್ದು, ತಮ್ಮ ತಪ್ಪನ್ನು ತಿರುಚಲು ತಮಗೆ ಬೇಕಾದಂತೆ ಅಧಿಕಾರಿಗಳ ಮೇಲೆ ದರ್ಪ ತೋರಿಸಿ ಅಮಾನತು ಮಾಡಿದ್ದಾರೆ.ಕೂಡಲೇ ಆದೇಶವನ್ನು ಹಿಂಪಡೆದು ಅದೇ ಹುದ್ದೆಯಲ್ಲಿ ಮುಂದುವರೆಸಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಆಮ್ ಆದಿ ಪಾರ್ಟಿ ಜಿಲ್ಲಾಧ್ಯಕ್ಷ ಭೀಮರಾಯ ನಾಯಕ,ಇನ್ನಿತರರು ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X