ರಾಜ್ಯಸಭೆಯಿಂದ ಪತ್ರ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ತನಿಖೆ ಕೈಬಿಟ್ಟ ಸುಪ್ರೀಂ ಕೋರ್ಟ್

Date:

Advertisements

ವಿಎಚ್‌ಪಿ ಕಾರ್ಯಕ್ರಮವೊಂದರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ವಿವಾದಾತ್ಮಕ ಹೇಳಿಕೆಗಳ ಕುರಿತು ಆಂತರಿಕ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿತ್ತು. ಆದರೆ ರಾಜ್ಯಸಭಾ ಕಾರ್ಯದರ್ಶಿಯಿಂದ ಈ ಬಗ್ಗೆ ಪತ್ರ ಬಂದ ನಂತರ ಯೋಜನೆಯನ್ನು ಕೈಬಿಡಲಾಯಿತು ಎಂದು ಮೂಲಗಳು ತಿಳಿಸಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ.

ಮಾರ್ಚ್‌ನಲ್ಲಿ ರಾಜ್ಯಸಭಾ ಕಾರ್ಯದರ್ಶಿಯವರು ತಮ್ಮ ಪತ್ರದಲ್ಲಿ ಇಂತಹ ಯಾವುದೇ ಪ್ರಕ್ರಿಯೆಗೆ ಅವಕಾಶ ನೀಡುವ ಅಧಿಕಾರ ರಾಜ್ಯಸಭಾ ಸ್ಪೀಕರ್, ಸಂಸತ್ತು ಮತ್ತು ರಾಷ್ಟ್ರಪತಿಗಳಿಗೆ ಮಾತ್ರ ಇದೆ ಎಂದು ಹೇಳಿದ ನಂತರ ಕ್ರಮವನ್ನು ಕೈಬಿಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೌಡಿಶೀಟರ್ ಸುಹಾಸ್ ಹತ್ಯೆ ತನಿಖೆಗೆ ಎನ್‌ಐಎ ಪ್ರವೇಶ: ಸಮಾಜಕ್ಕೆ ಕೊಟ್ಟ ಸಂದೇಶವೇನು?

Advertisements

ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ವರದಿ ಪಡೆದ ಬಳಿಕ ನ್ಯಾಯಮೂರ್ತಿ ಯಾದವ್ ಅವರ ನಡವಳಿಕೆಯನ್ನು ಪರಿಶೀಲಿಸುವ ಅಗತ್ಯವಿದೆಯೇ ಎಂದು ನಿರ್ಣಯಿಸಲು ಭಾರತದ ಮುಖ್ಯ ನ್ಯಾಯಾಧೀಶರಾದ ಸಂಜೀವ್ ಖನ್ನಾ ಅವರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದರು. ಆದರೆ ಆ ಬಳಿಕ ಅದನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

2024ರ ಡಿಸೆಂಬರ್ 8ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ವಿಎಚ್‌ಪಿ ಕಾರ್ಯಕ್ರಮದಲ್ಲಿ ಶೇಖರ್ ಕುಮಾರ್ ಯಾದವ್ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ವ್ಯಾಪಕ ಟೀಕೆ ಮತ್ತು ಖಂಡನೆ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X