ಬೆಂಗಳೂರು | ರಾಜಕಾಲುವೆ ಅಕ್ರಮ ಒತ್ತುವರಿ: 13 ಕಟ್ಟಡ ನಿರ್ಮಾಣ ತೆರವು

Date:

Advertisements
  • 700 ಮೀಟರ್ ಉದ್ದದ ರಾಜಕಾಲುವೆಯ ಮೇಲೆ 13 ಕಟ್ಟಡ ನಿರ್ಮಾಣ
  • ರಾಜಕಾಲುವೆ ಒತ್ತುವರಿ ಮಾಡಿದವರಿಗೆ ತಹಶೀಲ್ದಾರ್ ಅವರಿಂದ ನೋಟಿಸ್

ಬೆಂಗಳೂರಿನ ಪುಲಕೇಶಿನಗರದ ಶಾಂಪುರನಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿದ್ದ ಸ್ಥಳದಲ್ಲಿ ಬುಧವಾರದಿಂದ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ಶಾಂಪುರ ವ್ಯಾಪ್ತಿಯಲ್ಲಿ ಸುಮಾರು 700 ಮೀಟರ್ ಉದ್ದದ ರಾಜಕಾಲುವೆಯ ಮೇಲೆ 13 ಕಟ್ಟಡಗಳನ್ನು ನಿರ್ಮಾಣ ಮಾಡಿಕೊಳ್ಳಲಾಗಿದೆ. ಈಗಾಗಲೇ ಕಂದಾಯ ಇಲಾಖೆಯ ಭೂಮಾಪಕರಿಂದ ಒತ್ತುವರಿಯಾಗಿರುವ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ ಒತ್ತುವರಿ ಮಾಡಿರುವವರಿಗೆ ತಹಶೀಲ್ದಾರ್ ಅವರಿಂದ ನೋಟಿಸ್ ನೀಡಲಾಗಿದೆ.

ಕಂದಾಯ ಇಲಾಖೆಯ ಭೂಮಾಪಕರು, ವಾರ್ಡ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬೃಹತ್ ನೀರುಗಾಲುವೆ ವಿಭಾಗದ ಇಂಜಿನಿಯರ್ ನೇತೃತ್ವದಲ್ಲಿ ಬುಧವಾರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

Advertisements

“ರಾಜಕಾಲುವೆಯ ಪ್ರದೇಶದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಂಡಿರುವುದರಿಂದ ಎಲೆಕ್ಟ್ರಾನಿಕ್ ಟೋಟಲ್ ಸ್ಟೇಷನ್ (ಇಟಿಎಸ್‌) ಸರ್ವೇ ಮೂಲಕ ಮತ್ತೊಮ್ಮೆ ಸಮೀಕ್ಷೆ ನಡೆಸಿ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಈಗಾಗಲೇ ಗುರುತಿಸಿರುವಂತಹ ಒತ್ತುವರಿ ಪ್ರದೇಶದಲ್ಲಿ ಮನೆಯ ಮಾಲೀಕರೇ ಸ್ವಯಂಪ್ರೇರಿತವಾಗಿ ತೆರವು ಮಾಡಿಕೊಳ್ಳುತ್ತಿದ್ದು, ಇಟಿಎಸ್‌ ಸಮೀಕ್ಷೆ ಪೂರ್ಣಗೊಂಡ ಬಳಿಕ ಸಂಪೂರ್ಣ ಒತ್ತುವರಿಯನ್ನು ತೆರವುಗೊಳಿಸಿ ರಾಜಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರ್ಮಿಕರು, ಸಲಕರಣೆಗಳ ಸಮಸ್ಯೆಯಿಂದ ಕಾವೇರಿ 5ನೇ ಹಂತದ ಯೋಜನೆ ವಿಳಂಬ ಸಾಧ್ಯತೆ

ಚನ್ನಸಂದ್ರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ಮಹದೇವಪುರ ವಲಯ ಕಾಡುಗೋಡಿ ವಾರ್ಡ್ ಚನ್ನಸಂದ್ರ ವ್ಯಾಪ್ತಿಯಲ್ಲಿ ಸುಮಾರು 30 ಮೀಟರ್ ಉದ್ದದ ರಾಜಕಾಲುವೆಯಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ಮಳಿಗೆಗಳನ್ನು ಸ್ವಯಂ ಪ್ರೇರಿತವಾಗಿ ಒತ್ತುವರಿದಾರರು ತೆರವುಗೊಳಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X